25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬಾರ್ಯ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಬಾರ್ಯ ಇದರ 2025 ರಿಂದ 2030ರ ವರೆಗಿನ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ (05.11.2025) ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಪ್ರಸನ್ನ ಗೌಡ, ಪ್ರವೀಣ್ ರೈ, ಪ್ರಶಾಂತ್ ಪೈ, ಚಂದ್ರಶೇಖರ ಕುಂಡಡ್ಕ, ಮೋಹನ್ ಗೌಡ, ಹರ್ಷಿತ್ ಕಲಾಯ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ಸೇಸಪ್ಪ ಕೋಟ್ಯಾನ್, ಹಿಂದುಳಿದ ಬಿ ಕ್ಷೇತ್ರ ದಿಂದ ರಾಜೇಶ್ ರೈ ಹೆನ್ನಡ್ಕ, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಸವಿತಾ ವೆಂಕಟೇಶ್, ಶ್ರೀಮತಿ ಹೇಮಾವತಿ ಸುರೇಶ್, ಪರಿಶಿಷ್ಟ ಜಾತಿ ಕ್ಷೇತ್ರ ದಿಂದ ಸುರೇಶ್ ಸುಣ್ಣಜೆ, ಪರಿಶಿಷ್ಟ ಪಂಗಡದಿಂದ ಶಿವರಾಮ ನಾಯ್ಕ ಕೆಳಗಿನಂಗಡಿ ಇವರುಗಳು ಬಿ.ವಿ. ಪ್ರತಿಮಾ ರಿಟರ್ನಿಂಗ್ ಅಧಿಕಾರಿಯವರಿಗೆ ಇಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿಗಳಾದ ಮಂಡಲ ಕಾರ್ಯದರ್ಶಿ ಸುಂದರ್ ಹೆಗ್ಡೆ, ಮಹೇಶ್ ಕೋಟ್ಯಾನ್ ಜೆಂಕ್ಯಾರ್
ಪುತ್ತಿಲ ಶಕ್ತಿ ಕೇಂದ್ರ ಪ್ರಮುಖರಾದ ಪ್ರವೀಣ್ ಪೂಜಾರಿ ಬೇಂಗಿಲ, ದಯಾನಂದ ಆಳ್ವ, ಪಂಚಾಯತ್ ಸದಸ್ಯರಾದ ಧರ್ಣಪ್ಪ ಗೌಡ, ವಸಂತ ಬೋಳ್ಡೆಲ್, ಕಮಲಾಕ್ಷ ಗೌಡ, ಬೂತ್ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya
error: Content is protected !!