ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾIಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಅಭಿವಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಮುರಳಿ ಬಲಿಪ , ಕಾರ್ಯದರ್ಶಿಯಾದ ಅಮಿತಾನಂದ ಹೆಗ್ಡೆ , ಪೂರ್ವ ಪ್ರಾಂತ್ಯ ಅಧ್ಯಕ್ಷರಾದ ಲಯನ್ ವಸಂತ ಶೆಟ್ಟಿ ಶ್ರದ್ಧಾ , ಪೂರ್ವ ವಲಯ ಅಧ್ಯಕ್ಷರಾದ ಉಮೇಶ್ ಶೆಟ್ಟಿ , ಲಯನ್ ರಾಮಕೃಷ್ಣ ಗೌಡ , ಸದಸ್ಯರಾದ ಲಯನ್ ಬಿ ಭುಜಬಲಿ, ಲಯನ್ ಕೃಷ್ಣಚಾರ್, ಲಯನ್ ತಂಗಚ್ಚನ್, ಲಯನ್ ಮಂಜುನಾಥ ಜಿ, ಲಯನ್ ರಮೇಶ್ ಎಂ, ಲಿಯೋ ಕ್ಲಬ್ ಅಧ್ಯಕ್ಷರಾದ ಲಿಯೋ ಭಾಷಿಣಿ ಉಪಸ್ಥಿತರಿದ್ದರು.












