22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಅ.21 ರಂದು ದೀಪಾವಳಿಯನ್ನು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ದೀಪ ಬೆಳಗಿಸುವುದರ ಮೂಲಕ ಪ್ರಾರಂಭವಾಯಿತು. ವಿದ್ಯಾರ್ಥಿನಿಯಾದ ಬಿಂದುರವರು ದೀಪಾವಳಿಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿನಿಯರು ನೃತ್ಯ, ನಾಟಕ ಪ್ರದರ್ಶಿಸುವ ಮೂಲಕ ಎಲ್ಲರನ್ನೂ ಮನರಂಜಿಸಿದರು. ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ಆಗಮಿಸಿ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ದೀಪಾವಳಿಯು ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಹಬ್ಬವಾಗಿದೆ ಎಂದು ಹೇಳಿ ಮಕ್ಕಳಿಗೆ ದೀಪಾವಳಿಯ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಮಡಂತ್ಯಾರು ಚರ್ಚ್ ಸಹಾಯಕ ಧರ್ಮಗುರುಗಳಾದ ವಂ|ಸ್ವಾ| ಲ್ಯಾರಿ ಪಿಂಟೋ , ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ರವೀಂದ್ರ ರೈ ಹಾಗೂ ಶಿಕ್ಷಕರ-ರಕ್ಷಕ ಸಂಘದ ಸದಸ್ಯ ಪ್ರವೀಣ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಎಲ್ರಿಕಾ ಮತ್ತು ಆಫ್ನಾನ್ ರವರು ನಿರೂಪಿಸಿ, ಪ್ರೀತಮ್ ಸ್ವಾಗತಿಸಿ, ಕ್ಷಮ್ಯ ಧನ್ಯವಾದವನ್ನು ಸಮರ್ಪಿಸಿದರು.

Related posts

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!