25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

ಶಿರ್ಲಾಲು: ಮೊಬೈಲ್ ಟವರ್ ಸರಬರಾಜು ಕಚೇರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮೊಬೈಲ್ ಟವರಲ್ಲಿ ಗಿಡಗಂಟಿ, ಬಳ್ಳಿಗಳು ಬೆಳೆದು ಮುತ್ತಿಕೊಂಡು, ಮೊಬೈಲ್ ಟವರನ್ನೇ ಬಳ್ಳಿಗಳು ನುಂಗಿ ಅಪಾಯಕ್ಕೆ ಆಹ್ವಾನ ನೀಡುವಂತಿವೆ.

ಶಿರ್ಲಾಲು ಗ್ರಾಮ ಪಂಚಾಯತ್ ನ ಪಕ್ಕದಲ್ಲಿರುವ ಮೊಬೈಲ್ ಟವರ್ ನ ಬುಡದಿಂದ ಕೊಡಿಯವರೆಗೆ ಸಂಪೂರ್ಣ ಬಳ್ಳಿಗಳು ಮುತ್ತಿಕೊಂಡಿದೆ. ಈ ರೀತಿ ಬಳ್ಳಿಗಳು ಬೆಳೆಯಲು ಸುಮಾರು ಸಮಯ ಬೇಕಾಗುತ್ತೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿದೆ ಹೋಗಿದ್ದು ಮಾತ್ರ ವಿಪರ್ಯಾಸ ಎಂದು ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ಸಮಯದಲ್ಲಿ ಶಿರ್ಲಾಲು ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಎಲ್ಲರಿಗೂ ತೊಂದರೆಯಾಗಿದೆ. ಶಿರ್ಲಾಲುವಿನ‌ ಸಾರ್ವಜನಿಕರು ಎಷ್ಟೋ ಸಲ ಅಧಿಕಾರಿಗಳಿಗೆ ನೆಟ್ವರ್ಕ್ ಸಮಸ್ಯೆಯ ಗಂಭೀರತೆ ಬಗ್ಗೆ ತಿಳಿಸಿದರು ಯಾವುದೇ ಪ್ರಯೋಜನವಾಗಲಿಲ್ಲ. ಈ ರೀತಿ ಟವರಲ್ಲಿ ಬಳ್ಳಿಗಳು ಬೆಳೆದರೆ ನೆಟ್ವರ್ಕ್ ಬರುವುದಾದರೂ ಹೇಗೆ ಎಂದು ಸಾರ್ವಜನಿಕರು ಮಾತಾಡುತ್ತಿದ್ದಾರೆ‌.

ಮೊಬೈಲ್ ಟವರ್ ಸುತ್ತ ಮರಗಳು ಬೆಳೆದಿದೆ. ಜೊತೆಗೆ ಬಳ್ಳಿಗಳ ರಾಶಿಯಿದೆ. ಆದರೂ ಇದರ ಬಗ್ಗೆ ಗಮನಹರಿಸುವವರು ಅಥವಾ ಕೇಳುವವರು ಇಲ್ಲದಾಗಿದೆ. ಜನರಿಗೆ ಪ್ರಯೋಜನವಾಗದ ಮೊಬೈಲ್ ಟವರ್ ಇದ್ದರೇನು, ಬಿಟ್ಟರೇನು ಎಂದು ಜನರು ಅಧಿಕಾರಿಗಳನ್ನು ದೂರುತ್ತಿದ್ದಾರೆ.

Related posts

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ. ರವರಿಗೆ 619 ಅಂಕ-ರಾಜ್ಯಕ್ಕೆ 7ನೇ ರ‍್ಯಾಂಕ್

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya
error: Content is protected !!