July 23, 2026
Uncategorized

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

ಶಿರ್ಲಾಲು: ಮೊಬೈಲ್ ಟವರ್ ಸರಬರಾಜು ಕಚೇರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮೊಬೈಲ್ ಟವರಲ್ಲಿ ಗಿಡಗಂಟಿ, ಬಳ್ಳಿಗಳು ಬೆಳೆದು ಮುತ್ತಿಕೊಂಡು, ಮೊಬೈಲ್ ಟವರನ್ನೇ ಬಳ್ಳಿಗಳು ನುಂಗಿ ಅಪಾಯಕ್ಕೆ ಆಹ್ವಾನ ನೀಡುವಂತಿವೆ.

ಶಿರ್ಲಾಲು ಗ್ರಾಮ ಪಂಚಾಯತ್ ನ ಪಕ್ಕದಲ್ಲಿರುವ ಮೊಬೈಲ್ ಟವರ್ ನ ಬುಡದಿಂದ ಕೊಡಿಯವರೆಗೆ ಸಂಪೂರ್ಣ ಬಳ್ಳಿಗಳು ಮುತ್ತಿಕೊಂಡಿದೆ. ಈ ರೀತಿ ಬಳ್ಳಿಗಳು ಬೆಳೆಯಲು ಸುಮಾರು ಸಮಯ ಬೇಕಾಗುತ್ತೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿದೆ ಹೋಗಿದ್ದು ಮಾತ್ರ ವಿಪರ್ಯಾಸ ಎಂದು ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ಸಮಯದಲ್ಲಿ ಶಿರ್ಲಾಲು ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಎಲ್ಲರಿಗೂ ತೊಂದರೆಯಾಗಿದೆ. ಶಿರ್ಲಾಲುವಿನ‌ ಸಾರ್ವಜನಿಕರು ಎಷ್ಟೋ ಸಲ ಅಧಿಕಾರಿಗಳಿಗೆ ನೆಟ್ವರ್ಕ್ ಸಮಸ್ಯೆಯ ಗಂಭೀರತೆ ಬಗ್ಗೆ ತಿಳಿಸಿದರು ಯಾವುದೇ ಪ್ರಯೋಜನವಾಗಲಿಲ್ಲ. ಈ ರೀತಿ ಟವರಲ್ಲಿ ಬಳ್ಳಿಗಳು ಬೆಳೆದರೆ ನೆಟ್ವರ್ಕ್ ಬರುವುದಾದರೂ ಹೇಗೆ ಎಂದು ಸಾರ್ವಜನಿಕರು ಮಾತಾಡುತ್ತಿದ್ದಾರೆ‌.

ಮೊಬೈಲ್ ಟವರ್ ಸುತ್ತ ಮರಗಳು ಬೆಳೆದಿದೆ. ಜೊತೆಗೆ ಬಳ್ಳಿಗಳ ರಾಶಿಯಿದೆ. ಆದರೂ ಇದರ ಬಗ್ಗೆ ಗಮನಹರಿಸುವವರು ಅಥವಾ ಕೇಳುವವರು ಇಲ್ಲದಾಗಿದೆ. ಜನರಿಗೆ ಪ್ರಯೋಜನವಾಗದ ಮೊಬೈಲ್ ಟವರ್ ಇದ್ದರೇನು, ಬಿಟ್ಟರೇನು ಎಂದು ಜನರು ಅಧಿಕಾರಿಗಳನ್ನು ದೂರುತ್ತಿದ್ದಾರೆ.

Related posts

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

Suddi Udaya

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

Suddi Udaya
error: Content is protected !!