23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

ಉಜಿರೆ: ಬೆನಕ ಹೆಲ್ತ್ ಸೆಂಟರ್ ಉಜಿರೆ ವತಿಯಿಂದ ಅದರ ರಜತ ಮಹೋತ್ಸವ ಮತ್ತು ದೀಪಾವಳಿ ಪ್ರಯುಕ್ತ ಸಾಂಪ್ರದಾಯಿಕ ಪೂಜೆಯೊಂದಿಗೆ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ ಗೋಪಾಲಕೃಷ್ಣ ರವರು ಮಾತನಾಡುತ್ತ ಆಂಬುಲೆನ್ಸ್ ಚಾಲಕರು ನಿಜವಾದ ಅರ್ಥದಲ್ಲಿ ಜೀವರಕ್ಷಕರು ಯಾವುದೇ ಕಾಲವಿರಲಿ , ಯಾವುದೇ ಸಮಯವಿರಲಿ ಕರೆದಾಗ ಯಾವುದೇ ಹಳ್ಳಿಯ ಮೂಲೆಯಲ್ಲೂ ಸ್ಪಂದಿಸಿ ರೋಗಿಗಳನ್ನು ಆಸ್ಪತ್ರೆಗೆ ತುರ್ತಾಗಿ ಸೇರಿಸಿ ಅವರ ಜೀವವನ್ನು ಉಳಿಸುವ ಕಾರ್ಯ ಸದಾ ಸುಸ್ತ್ಯಾರ್ಹ ಮತ್ತು ಅಭಿನಂದನೀಯ ಎಂದು ಎಲ್ಲ ಆಂಬುಲೆನ್ಸ್ ಚಾಲಕರ ಈ ಸೇವೆಯನ್ನು ಸ್ಮರಿಸಿದರು .
ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಹಿರಿಯ ಆಂಬುಲೆನ್ಸ್ ಚಾಲಕರಾದ ಅಬ್ದುಲ್ ಹಮೀದರವರನ್ನು ಶಾಲು ಹೊದಿಸಿ , ಫಲಪುಷ್ಪ & ಸ್ಮರಣಿಕೆ ನೀಡಿ ವಿಶೇಷವಾಗಿ ಸನ್ಮಾನಿಸಲಾಯಿತು .

ಈ ಸಂದರ್ಭದಲ್ಲಿ ಹಮೀದ್ ರವರು ತನ್ನ ಪ್ರಾರಂಭದ ದಿನಗಳಲ್ಲಿ ಬೆನಕ ಆಸ್ಪತ್ರೆ ನೀಡಿದ ಸಹಕಾರ ಮತ್ತು ಡಾ.ಗೋಪಾಲಕೃಷ್ಣ ರವರು ತೋರಿದ ಪ್ರೀತಿ ವಿಶ್ವಾಸವನ್ನು ನೆನಪಿಸಿ ಕೊಂಡು ಈ ಆಸ್ಪತ್ರೆ ಇನ್ನಷ್ಟು ಬೆಳೆದು ಇನ್ನು ಹೆಚ್ಚಿನ ರೋಗಿಗಳ ಪಾಲಿಗೆ ವರದಾನವಾಗಲಿ ಎಂದು ಆಶಿಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ 20 ಕ್ಕೂ ಹೆಚ್ಚು ಆಂಬುಲೆನ್ಸ್ ಚಾಲಕರನ್ನು ಪ್ರತ್ಯೇಕವಾಗಿ ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು . ಈ ಕಾರ್ಯಕ್ರಮದಲ್ಲಿ ಡಾ.ಭಾರತಿ ಜಿ ಕೆ ಮತ್ತು ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು . ಎಸ್ .ಜಿ ಭಟ್ ಸಾರ್ವಜನಿಕ ಸಂಪರ್ಕಾಧಿಕಾರಿ ಸ್ವಾಗತಿಸಿ ವಂದಿಸಿದರು.

Related posts

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ರಕ್ತೇಶ್ವರಿ ಪದವು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!