September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ಉಜಿರೆಯಲ್ಲಿ ಅ.18 ರಂದು ದೀಪಾವಳಿ ಹಬ್ಬ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ದೀಪಾವಳಿಯ ಹಿನ್ನೆಲೆಯನ್ನು ವಿವರಿಸಿದರು.

ಶತಮಾನಗಳಿಂದ ಆಚರಿಸಲಾಗುತ್ತಿರುವ ಈ ಹಬ್ಬ ಜೀವನದಲ್ಲಿ ಹೊಸತನ, ಚೈತನ್ಯ ಮತ್ತು ನೆಮ್ಮದಿಯ ಬೆಳಕನ್ನು ತುಂಬುತ್ತದೆ ಎಂದರು.

ಕಾರ್ಯಕ್ರಮದ ಅತಿಥಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕರು ಕಿರಿಯಾಡಿ ಶ್ರೀಮತಿ ರಾಜೇಶ್ವರಿ ಮಾತನಾಡಿ, ದೀಪಾವಳಿ ಹಬ್ಬವು ಕೇವಲ ಭಾರತದಲ್ಲೇ ಅಲ್ಲ, ವಿಶ್ವದಾದ್ಯಂತ ಸಂತೋಷದಿಂದ ಆಚರಿಸಲಾಗುತ್ತಿರುವ ಹಬ್ಬ. ದೀಪಾವಳಿಯ ಆಚರಣೆಯು ಕೇವಲ ಹಬ್ಬವಲ್ಲ, ನಮ್ಮ ಸಂಸ್ಕೃತಿ ಸಂಸ್ಕಾರ. ನಮ್ಮ ಆಚರಣೆಗಳ ಹಿನ್ನಲೆ ತಿಳಿದುಕೊಂಡು ಆಚರಣೆಗಳನ್ನು ಮುಂದುವರೆಸುತ್ತಾ ಬರುವುದು ನಮ್ಮ ಕರ್ತವ್ಯ ಎಂದರು.

ದೀಪಾವಳಿ ಹಬ್ಬ ಜೀವನದಲ್ಲಿ ಬೆಳಕು, ಸತ್ಯ ಮತ್ತು ಧನಾತ್ಮಕ ಚಿಂತನೆಯ ಸಂದೇಶವನ್ನು ಸಾರುತ್ತದೆ ಎಂದರು.
ವಿದ್ಯಾರ್ಥಿ ತೌಫೀರಾ ಸ್ವಾಗತಿಸಿ, ತಸ್ಮಯಿ ಅತಿಥಿ ಪರಿಚಯಿಸಿದರು.ಫಾಯೀಝಾ ವಂದಿಸಿದರು. ಸಚಿತ್ ಭಟ್ ನಿರೂಪಿಸಿದರು.

ವಿದ್ಯಾರ್ಥಿಗಳು ಕುಣಿತ ಭಜನೆ, ಸಾಂಸ್ಕೃತಿಕ ನೃತ್ಯ, ದೀಪಾವಳಿ ದಿನಗಳ ವಿಶೇಷತೆಯ ವಾಚನ ಮಾಡಲಾಯಿತು. ಮಕ್ಕಳೇ ರಚಿಸಿದ ಗೂಡುದೀಪಗಳ ಅಲಂಕಾರ, ತಳಿರುತೋರಣ ದೀಪಾವಳಿ ಆಚರಣೆಗೆ ವಿಶೇಷ ಮೆರುಗು ತಂದಿತು.ವಿದ್ಯಾರ್ಥಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya
error: Content is protected !!