23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ಉಜಿರೆಯಲ್ಲಿ ಅ.18 ರಂದು ದೀಪಾವಳಿ ಹಬ್ಬ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ದೀಪಾವಳಿಯ ಹಿನ್ನೆಲೆಯನ್ನು ವಿವರಿಸಿದರು.

ಶತಮಾನಗಳಿಂದ ಆಚರಿಸಲಾಗುತ್ತಿರುವ ಈ ಹಬ್ಬ ಜೀವನದಲ್ಲಿ ಹೊಸತನ, ಚೈತನ್ಯ ಮತ್ತು ನೆಮ್ಮದಿಯ ಬೆಳಕನ್ನು ತುಂಬುತ್ತದೆ ಎಂದರು.

ಕಾರ್ಯಕ್ರಮದ ಅತಿಥಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕರು ಕಿರಿಯಾಡಿ ಶ್ರೀಮತಿ ರಾಜೇಶ್ವರಿ ಮಾತನಾಡಿ, ದೀಪಾವಳಿ ಹಬ್ಬವು ಕೇವಲ ಭಾರತದಲ್ಲೇ ಅಲ್ಲ, ವಿಶ್ವದಾದ್ಯಂತ ಸಂತೋಷದಿಂದ ಆಚರಿಸಲಾಗುತ್ತಿರುವ ಹಬ್ಬ. ದೀಪಾವಳಿಯ ಆಚರಣೆಯು ಕೇವಲ ಹಬ್ಬವಲ್ಲ, ನಮ್ಮ ಸಂಸ್ಕೃತಿ ಸಂಸ್ಕಾರ. ನಮ್ಮ ಆಚರಣೆಗಳ ಹಿನ್ನಲೆ ತಿಳಿದುಕೊಂಡು ಆಚರಣೆಗಳನ್ನು ಮುಂದುವರೆಸುತ್ತಾ ಬರುವುದು ನಮ್ಮ ಕರ್ತವ್ಯ ಎಂದರು.

ದೀಪಾವಳಿ ಹಬ್ಬ ಜೀವನದಲ್ಲಿ ಬೆಳಕು, ಸತ್ಯ ಮತ್ತು ಧನಾತ್ಮಕ ಚಿಂತನೆಯ ಸಂದೇಶವನ್ನು ಸಾರುತ್ತದೆ ಎಂದರು.
ವಿದ್ಯಾರ್ಥಿ ತೌಫೀರಾ ಸ್ವಾಗತಿಸಿ, ತಸ್ಮಯಿ ಅತಿಥಿ ಪರಿಚಯಿಸಿದರು.ಫಾಯೀಝಾ ವಂದಿಸಿದರು. ಸಚಿತ್ ಭಟ್ ನಿರೂಪಿಸಿದರು.

ವಿದ್ಯಾರ್ಥಿಗಳು ಕುಣಿತ ಭಜನೆ, ಸಾಂಸ್ಕೃತಿಕ ನೃತ್ಯ, ದೀಪಾವಳಿ ದಿನಗಳ ವಿಶೇಷತೆಯ ವಾಚನ ಮಾಡಲಾಯಿತು. ಮಕ್ಕಳೇ ರಚಿಸಿದ ಗೂಡುದೀಪಗಳ ಅಲಂಕಾರ, ತಳಿರುತೋರಣ ದೀಪಾವಳಿ ಆಚರಣೆಗೆ ವಿಶೇಷ ಮೆರುಗು ತಂದಿತು.ವಿದ್ಯಾರ್ಥಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜೀರ್ಣೋದ್ಧಾರಗೊಳ್ಳುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ

Suddi Udaya

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya
error: Content is protected !!