September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

ಉಜಿರೆ: ಬೆನಕ ಆಸ್ಪತ್ರೆ ವತಿಯಿಂದ ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರಲ್ಲಿ ಅ.21 ರಂದು ಸಂಭ್ರಮ ಮತ್ತು ಸಡಗರದಿಂದ ದೀಪಾವಳಿಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಹಾಗೂ ಡಾ. ಭಾರತಿ ದಂಪತಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಡಾ. ಗೋಪಾಲಕೃಷ್ಣ ಅವರು ಮಾತನಾಡಿ, ದೀಪಾವಳಿ ಎಂದರೆ ಕೇವಲ ಪಟಾಕಿ, ಬೆಳಕು, ಸಿಹಿ ಅಷ್ಟೇ ಅಲ್ಲ — ಅದು ಸ್ನೇಹ, ಹಂಚಿಕೊಳ್ಳುವಿಕೆ ಮತ್ತು ಕೃತಜ್ಞತೆಯ ಹಬ್ಬ. ಈ ಮಕ್ಕಳು ತಮ್ಮ ನಿಷ್ಕಲ್ಮಶ ನಗು ಮತ್ತು ಪ್ರಾಮಾಣಿಕ ಹೃದಯದಿಂದ ಈ ಹಬ್ಬದ ಅರ್ಥವನ್ನು ನಮಗೆ ತೋರಿಸಿದ್ದಾರೆ. ಬೆನಕ ಆಸ್ಪತ್ರೆ ಸದಾ ಆರೋಗ್ಯ ಸೇವೆಯ ಜೊತೆಗೆ ಸಮಾಜದ ಎಲ್ಲ ವರ್ಗದವರಿಗೂ ಸ್ಪಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.
ಇಂದಿನ ಈ ದೀಪಾವಳಿ ಸಂಭ್ರಮವು ಆ ಸಾಮಾಜಿಕ ಬದ್ಧತೆಯ ಇನ್ನೊಂದು ಉದಾಹರಣೆ. ನಿಮ್ಮೆಲ್ಲರ ಹೃದಯದಲ್ಲಿ ಬೆಳಕಿನಂತೆ ಸಂತೋಷ, ಆರೋಗ್ಯ ಮತ್ತು ಶಾಂತಿ ಸದಾ ತುಂಬಿರಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷರಾದ ಮಂಗಳೂರು ಸಾನಿಧ್ಯ ಕೇಂದ್ರದ ನಿರ್ದೇಶಕರಾದ ಡಾ. ವಸಂತ ಕುಮಾರ್ ಶೆಟ್ಟಿ ಅವರು ಮಾತನಾಡಿ ಸಾನಿಧ್ಯ ಕೇಂದ್ರದ ಮಕ್ಕಳು ಹೆತ್ತವರಿಗೆ ವರವೇ ಹೊರತು ಶಾಪವಲ್ಲ. ಅವರ ಪ್ರತಿಭೆಯನ್ನು ಗುರುತಿಸಿ, ಸೂಕ್ತ ಕೌಶಲ್ಯ ತರಬೇತಿಯನ್ನು ನೀಡಿ, ಸಮಾಜದ ಮುಖ್ಯವಾಹಿನಿಗೆ ತರಬಹುದೆಂದು ನುಡಿದರು.

ಪ್ರಾರಂಭದಲ್ಲಿ ಸಾನಿಧ್ಯ ಕೇಂದ್ರದ ಸಂಚಾಲಕರಾದ ರೋಷನ್ ಸೀಕ್ವೇರಾ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬೆನಕ ಆಸ್ಪತ್ರೆಯ ಡಾ. ಆದಿತ್ಯ ರಾವ್, ಡಾ. ಅಂಕಿತಾ ಜಿ. ಭಟ್, ಡಾ. ರೋಹಿತ್ ಜಿ. ಭಟ್ ಹಾಗೂ ಡಾ. ನವ್ಯಾ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಮಕ್ಕಳೊಂದಿಗೆ ಪಟಾಕಿ ಸಿಡಿಸಿ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು.

ಆನಂತರ ಸಾನಿಧ್ಯ ಕೇಂದ್ರದ ಮಕ್ಕಳು ತಯಾರಿಸಿದ ಕರಕುಶಲ ವಸ್ತುಗಳನ್ನು ವೀಕ್ಷಿಸಿ, ಅವರ ಕಲೆ ಮತ್ತು ಪ್ರತಿಭೆಯನ್ನು ಮನಸಾರೆ ಮೆಚ್ಚಿದರು.

ಕಾರ್ಯಕ್ರಮದ ಕೊನೆಯಲ್ಲಿ ಸಾನಿಧ್ಯ ಸಂಸ್ಥೆಯ ಮಕ್ಕಳು ಹಾಗೂ ಸಿಬ್ಬಂದಿಗಳಿಗೆ ಸಿಹಿ ವಿತರಣೆ ನಡೆಸಲಾಯಿತು.

ಈ ಕಾರ್ಯಕ್ರಮದ ಮೂಲಕ ಬೆನಕ ಆಸ್ಪತ್ರೆ ಆರೋಗ್ಯ ಸೇವೆಯ ಜೊತೆಗೆ ಸಮಾಜದ ಪ್ರತಿ ವರ್ಗದವರೊಂದಿಗೆ ಸಂತೋಷ ಹಂಚಿಕೊಳ್ಳುವ ಸಂದೇಶವನ್ನು ನೀಡಿತು.

Related posts

ಎಕ್ಸೆಲ್‌ನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!