23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಆಚರಣೆಯ ಸಂದರ್ಭದಲ್ಲಿ ಅ.24ರಂದು ಕಂಚಿಕಾಮಕೋಟಿ ಪೀಠದ ಸ್ವಾಮೀಜಿಯವರು ಬಳಸುತ್ತಿದ್ದ ಪವಿತ್ರ ರಿಕ್ಷಾವನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಲಾಯಿತು.

ಭಕ್ತರು ತಂದ ರಿಕ್ಷಾವನ್ನು ಧರ್ಮಸ್ಥಳದಲ್ಲಿ ಮಾಹಿತಿ ಕಚೇರಿ ಬಳಿಯಿಂದ ಭವ್ಯ ಮೆರವಣಿಗೆಯಲ್ಲಿ ಹೆಗ್ಗಡೆಯವರ ನಿವಾಸ ಬೀಡಿಗೆ ತರಲಾಯಿತು.

ಕಂಚಿ ಕಾಮಕೋಟಿ ಸ್ವಾಮೀಜಿಯವರು ತಮ್ಮ  ಪಾದಯಾತ್ರೆಯ ಸಂದರ್ಭದಲ್ಲಿ ಅವಶ್ಯಕ ವಸ್ತುಗಳಾದ ಪಾದುಕೆಗಳನ್ನು, ಅನುಷ್ಠಾನ ಪಾತ್ರೆಗಳನ್ನು ಮತ್ತು ದರ್ಭಾಸನದ ಸಾಗಾಣಿಕೆಗೆ ಇದನ್ನು ಬಳಸುತ್ತಿದ್ದರು.

ಪೂಜ್ಯ ಹೆಗ್ಗಡೆಯವರು ಈ ವಿಶಿಷ್ಟ ಕೊಡುಗೆಯನ್ನು ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.

Related posts

ಶಿರ್ಲಾಲು :55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya
error: Content is protected !!