25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಆಚರಣೆಯ ಸಂದರ್ಭದಲ್ಲಿ ಅ.24ರಂದು ಕಂಚಿಕಾಮಕೋಟಿ ಪೀಠದ ಸ್ವಾಮೀಜಿಯವರು ಬಳಸುತ್ತಿದ್ದ ಪವಿತ್ರ ರಿಕ್ಷಾವನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಲಾಯಿತು.

ಭಕ್ತರು ತಂದ ರಿಕ್ಷಾವನ್ನು ಧರ್ಮಸ್ಥಳದಲ್ಲಿ ಮಾಹಿತಿ ಕಚೇರಿ ಬಳಿಯಿಂದ ಭವ್ಯ ಮೆರವಣಿಗೆಯಲ್ಲಿ ಹೆಗ್ಗಡೆಯವರ ನಿವಾಸ ಬೀಡಿಗೆ ತರಲಾಯಿತು.

ಕಂಚಿ ಕಾಮಕೋಟಿ ಸ್ವಾಮೀಜಿಯವರು ತಮ್ಮ  ಪಾದಯಾತ್ರೆಯ ಸಂದರ್ಭದಲ್ಲಿ ಅವಶ್ಯಕ ವಸ್ತುಗಳಾದ ಪಾದುಕೆಗಳನ್ನು, ಅನುಷ್ಠಾನ ಪಾತ್ರೆಗಳನ್ನು ಮತ್ತು ದರ್ಭಾಸನದ ಸಾಗಾಣಿಕೆಗೆ ಇದನ್ನು ಬಳಸುತ್ತಿದ್ದರು.

ಪೂಜ್ಯ ಹೆಗ್ಗಡೆಯವರು ಈ ವಿಶಿಷ್ಟ ಕೊಡುಗೆಯನ್ನು ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.

Related posts

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya
error: Content is protected !!