September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಆಚರಣೆಯ ಸಂದರ್ಭದಲ್ಲಿ ಅ.24ರಂದು ಕಂಚಿಕಾಮಕೋಟಿ ಪೀಠದ ಸ್ವಾಮೀಜಿಯವರು ಬಳಸುತ್ತಿದ್ದ ಪವಿತ್ರ ರಿಕ್ಷಾವನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಲಾಯಿತು.

ಭಕ್ತರು ತಂದ ರಿಕ್ಷಾವನ್ನು ಧರ್ಮಸ್ಥಳದಲ್ಲಿ ಮಾಹಿತಿ ಕಚೇರಿ ಬಳಿಯಿಂದ ಭವ್ಯ ಮೆರವಣಿಗೆಯಲ್ಲಿ ಹೆಗ್ಗಡೆಯವರ ನಿವಾಸ ಬೀಡಿಗೆ ತರಲಾಯಿತು.

ಕಂಚಿ ಕಾಮಕೋಟಿ ಸ್ವಾಮೀಜಿಯವರು ತಮ್ಮ  ಪಾದಯಾತ್ರೆಯ ಸಂದರ್ಭದಲ್ಲಿ ಅವಶ್ಯಕ ವಸ್ತುಗಳಾದ ಪಾದುಕೆಗಳನ್ನು, ಅನುಷ್ಠಾನ ಪಾತ್ರೆಗಳನ್ನು ಮತ್ತು ದರ್ಭಾಸನದ ಸಾಗಾಣಿಕೆಗೆ ಇದನ್ನು ಬಳಸುತ್ತಿದ್ದರು.

ಪೂಜ್ಯ ಹೆಗ್ಗಡೆಯವರು ಈ ವಿಶಿಷ್ಟ ಕೊಡುಗೆಯನ್ನು ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಶಾಸಕರಿಗೆ ಮನವಿ

Suddi Udaya

ಉಜಿರೆ: ಬೈಕ್ ಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕ‌ರ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಶಾಸಕ ಹರೀಶ್ ಪೂಂಜರಿಗೆ ಭಾ.ಜ.ಪ. ಬೆಳ್ತಂಗಡಿ ಮಂಡಲದಿಂದ ಗೌರವ

Suddi Udaya

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya
error: Content is protected !!