25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

ಕಳಿಯ ಗ್ರಾಮ ಪಂಚಾಯತ್ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ನಾಗರೀಕ ಬಂಧುಗಳ ಸದುಪಯೋಗಕ್ಕಾಗಿ ಆಧಾರ್ ತಿದ್ದುಪಡಿ, ಹತ್ತು ವರ್ಷಗಳ ಅಪ್ಡೇಟ್, ಹದಿನೆಂಟು ವರ್ಷದ ಕೆಳಗಿನ ಹೊಸ ಆಧಾರ್ ಕಾರ್ಡ್, ವಿಳಾಸ ಬದಲಾವಣೆ ಇತ್ಯಾದಿಗಳ ಕ್ಯಾಂಪ್ ಎರಡು ದಿನ ನಡೆಸಲಾಗಿ ಸುಮಾರು ನೂರಕ್ಕೂ ಹೆಚ್ಚು ಮಂದಿಯು ಪ್ರಯೋಜನ ಪಡೆದುಕೊಂಡರು. ಜೊತೆಗೆ ಅಂಚೆ ಇಲಾಖೆಯ ವಿಶಿಷ್ಟ ಪ್ರಜಾ ಸ್ನೇಹಿ ಆರೋಗ್ಯ ವಿಮೆ, ಜೀವ ವಿಮೆ, ಸುಕನ್ಯಾ ಯೋಜನೆಯ ಮಾಹಿತಿ ಮತ್ತು ನೋಂದಣಿ ಕಾರ್ಯಕ್ರಮ ನಾಗರೀಕರ ಭಾಗವಹಿಸುವಿಕೆಯಲ್ಲಿ ಯಶಸ್ವಿಯಾಯಿತು.

ಕಾರ್ಯಕ್ರಮದ ಉದ್ಘಾಟನೆ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್ ಮೆದಿನ ನೆರವೇರಿಸಿದರು. ಉಪಾಧ್ಯಕ್ಷೆ ಶ್ರೀಮತಿ ಇಂದಿರಾ, ಗ್ರಾ.ಪಂ. ಸದಸ್ಯರಾದ ವಿಜಯ ಕುಮಾರ್, ಕೆ.ಎಮ್. ಅಬ್ದುಲ್ ಕರೀಮ್, ಹರೀಶ್ ಕುಮಾರ್, ಸುಧಾಕರ ಮಜಲು, ಲತೀಫ್ ಭಾಗವಹಿಸಿದರು.
ಅಂಚೆ ಇಲಾಖೆ ಪುತ್ತೂರು ಅಧಿಕಾರಿ ಗುರುಪ್ರಸಾದ್, ಅಂಚೆ ವಿಭಾಗ ಬೆಳ್ತಂಗಡಿ ಮೇಲ್ವಿಚಾರಕಿ ವಿಮಲ, ಕುವೆಟ್ಟು ಎ.ಬಿ.ಜೆ.ಎಮ್ ಕೆ ಸುಂದರ ಸಾಲಿಯಾನ್, ಶಿರ್ತಾಡಿ ಎ.ಬಿ.ಜೆ.ಎಮ್ ಹರ್ಷಿತ, ಕೊಯ್ಯೂರು ಅಂಚೆ ಪಾಲಕರು ಸಂತೃಪ್ತಿ ಅಂಚೆ ಇಲಾಖಾ ವತಿಯಿಂದ ಭಾಗವಹಿಸಿದರು.


ಕಳಿಯ ಗ್ರಾಮ ಪಂಚಾಯತ್ ಪ್ರಭಾರ ಪಿ.ಡಿ.ಓ ಕುಂಞ ಕೆ ಸ್ವಾಗತಿಸಿ, ನಿರೂಪಿಸಿದರು. ಸಿಬ್ಬಂದಿ ರವಿ ಹೆಚ್ ವಂದಿಸಿದರು. ಸಿಬ್ಬಂದಿಯವರಾದ ಶ್ರೀಮತಿ ಸುಚಿತ್ರ, ಸುರೇಶ್ ಕುಮಾರ್, ಶ್ರೀಮತಿ ಪ್ರಮೀಳಾ, ಶ್ರೀಮತಿ ನಂದಿನಿ P ರೈ, ಶ್ರೀಮತಿ ಶಶಿಕಲಾ ಸಹಕರಿಸಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!