23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

ಕಳಿಯ ಗ್ರಾಮ ಪಂಚಾಯತ್ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ನಾಗರೀಕ ಬಂಧುಗಳ ಸದುಪಯೋಗಕ್ಕಾಗಿ ಆಧಾರ್ ತಿದ್ದುಪಡಿ, ಹತ್ತು ವರ್ಷಗಳ ಅಪ್ಡೇಟ್, ಹದಿನೆಂಟು ವರ್ಷದ ಕೆಳಗಿನ ಹೊಸ ಆಧಾರ್ ಕಾರ್ಡ್, ವಿಳಾಸ ಬದಲಾವಣೆ ಇತ್ಯಾದಿಗಳ ಕ್ಯಾಂಪ್ ಎರಡು ದಿನ ನಡೆಸಲಾಗಿ ಸುಮಾರು ನೂರಕ್ಕೂ ಹೆಚ್ಚು ಮಂದಿಯು ಪ್ರಯೋಜನ ಪಡೆದುಕೊಂಡರು. ಜೊತೆಗೆ ಅಂಚೆ ಇಲಾಖೆಯ ವಿಶಿಷ್ಟ ಪ್ರಜಾ ಸ್ನೇಹಿ ಆರೋಗ್ಯ ವಿಮೆ, ಜೀವ ವಿಮೆ, ಸುಕನ್ಯಾ ಯೋಜನೆಯ ಮಾಹಿತಿ ಮತ್ತು ನೋಂದಣಿ ಕಾರ್ಯಕ್ರಮ ನಾಗರೀಕರ ಭಾಗವಹಿಸುವಿಕೆಯಲ್ಲಿ ಯಶಸ್ವಿಯಾಯಿತು.

ಕಾರ್ಯಕ್ರಮದ ಉದ್ಘಾಟನೆ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್ ಮೆದಿನ ನೆರವೇರಿಸಿದರು. ಉಪಾಧ್ಯಕ್ಷೆ ಶ್ರೀಮತಿ ಇಂದಿರಾ, ಗ್ರಾ.ಪಂ. ಸದಸ್ಯರಾದ ವಿಜಯ ಕುಮಾರ್, ಕೆ.ಎಮ್. ಅಬ್ದುಲ್ ಕರೀಮ್, ಹರೀಶ್ ಕುಮಾರ್, ಸುಧಾಕರ ಮಜಲು, ಲತೀಫ್ ಭಾಗವಹಿಸಿದರು.
ಅಂಚೆ ಇಲಾಖೆ ಪುತ್ತೂರು ಅಧಿಕಾರಿ ಗುರುಪ್ರಸಾದ್, ಅಂಚೆ ವಿಭಾಗ ಬೆಳ್ತಂಗಡಿ ಮೇಲ್ವಿಚಾರಕಿ ವಿಮಲ, ಕುವೆಟ್ಟು ಎ.ಬಿ.ಜೆ.ಎಮ್ ಕೆ ಸುಂದರ ಸಾಲಿಯಾನ್, ಶಿರ್ತಾಡಿ ಎ.ಬಿ.ಜೆ.ಎಮ್ ಹರ್ಷಿತ, ಕೊಯ್ಯೂರು ಅಂಚೆ ಪಾಲಕರು ಸಂತೃಪ್ತಿ ಅಂಚೆ ಇಲಾಖಾ ವತಿಯಿಂದ ಭಾಗವಹಿಸಿದರು.


ಕಳಿಯ ಗ್ರಾಮ ಪಂಚಾಯತ್ ಪ್ರಭಾರ ಪಿ.ಡಿ.ಓ ಕುಂಞ ಕೆ ಸ್ವಾಗತಿಸಿ, ನಿರೂಪಿಸಿದರು. ಸಿಬ್ಬಂದಿ ರವಿ ಹೆಚ್ ವಂದಿಸಿದರು. ಸಿಬ್ಬಂದಿಯವರಾದ ಶ್ರೀಮತಿ ಸುಚಿತ್ರ, ಸುರೇಶ್ ಕುಮಾರ್, ಶ್ರೀಮತಿ ಪ್ರಮೀಳಾ, ಶ್ರೀಮತಿ ನಂದಿನಿ P ರೈ, ಶ್ರೀಮತಿ ಶಶಿಕಲಾ ಸಹಕರಿಸಿದರು.

Related posts

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

Suddi Udaya

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

Suddi Udaya

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ಮೂಡುಕೋಡಿಯಲ್ಲಿ ಚಿರತೆ ಸೆರೆಹಿಡಿಯಲು ಬೋನ್ ಅಳವಡಿಕೆ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಗಸ್ತಿನಲ್ಲಿದ್ದ ಉರ್ವಾ ಠಾಣಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಬೈಕ್ ಸಹಸವಾರನಿಂದ ಹಲ್ಲೆ

Suddi Udaya
error: Content is protected !!