23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆಯಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಶುಭಾರಂಭ

ಗೇರುಕಟ್ಟೆ : ಇಲ್ಲಿಯ ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಅ.24 ರಂದು ಶುಭಾರಂಭಗೊಂಡಿದೆ.
ಕೃಷಿ ಪತ್ತಿನ ಸಹಕಾರ ಸಂಘದ ಹಿರಿಯ ನಿರ್ದೇಶಕ ಹರಿದಾಸ ಪಡಂತ್ತಾಯ ದೀಪ ಪ್ರಜ್ವಲನೆ ಮಾಡಿದರು.


ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಅಧ್ಯಕ್ಷತೆ ವಹಿಸಿ, ಉದ್ಯಮ ಯಶಸ್ವಿಯಾಗಲಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘವು ಸಹಕಾರ ನೀಡುವುದು ಹಾಗೂ ಕೃಷಿಕರ ಉತ್ಪನ್ನಗಳಿಗೆ ಉತ್ತಮ ದರ ನೀಡುವ ಮೂಲಕ ವ್ಯಾಪಾರ ವಹಿವಾಟು ಅಭಿವೃದ್ಧಿ ಹೊಂದಲು ಅವಕಾಶ ಇದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ನಿರ್ದೇಶಕ ಶೇಖರ ನಾಯ್ಕ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್. ಶೆಟ್ಟಿ, ಮೈರಳ್ಕೆ ಕಿರಾತ ಮೂರ್ತಿ ದೇವಸ್ಥಾನದ ಅಧ್ಯಕ್ಷ ಗೋಪಾಲ ಶೆಟ್ಟಿ, ಕೆ., ನಾಳ ದೇವಸ್ಥಾನದ ಅಧ್ಯಕ್ಷ ಹರೀಶ್ ಕುಮಾರ್ ಬಿ., ಹಿರಿಯರಾದ ಪೂವಪ್ಪ ಶೆಟ್ಟಿ, ಶ್ರೀಮತಿ ಶಾರದ ಉಮನಾಥ್ ಶೆಟ್ಟಿ, ಉಪಸ್ಥಿತರಿದ್ದು ಶುಭ ಹಾರೈಸಿದರು.


ಬೆಳ್ತಂಗಡಿ ಸುಮುಖ ಟ್ರೇಡರ್ಸ್ ಮಾಲಕ ಸದಾನಂದ ಶೆಟ್ಟಿ, ಆಕ್ಷಯ ಎಲೆಕ್ಟ್ರಿಕಲ್ ಮಾಲೀಕರ ಪುರಂದರ ಶೆಟ್ಟಿ, ಉದ್ಯಮಿ ಸಂತೋಷ್ ಶೆಟ್ಟಿ, ಹಿರಿಯರಾದ ಬಾಬು ಶೆಟ್ಟಿ,ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯ ಕಿಶೋರ್ ಶೆಟ್ಟಿ, ರಾಜಶೇಖರ ಶೆಟ್ಟಿ ಭಂಡಾರಿ ಗುಡ್ಡೆ, ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಾಹಣಾಧಿಕಾರಿ ಕವಿತಾ ಶೆಟ್ಟಿ, ಸಿಬ್ಬಂದಿಗಳು, ಸ್ಥಳೀಯ ವರ್ತಕರು ಹಾಗೂ ಸಿಬ್ಬಂದಿಗಳು ಸಂಸ್ಥೆಯ ಪಾಲುದಾರರ ಕುಟುಂಬಸ್ಥರು ಮತ್ತಿತರರಿದ್ದರು.


ಸಂಸ್ಥೆ ಪಾಲುದಾರರಾದ ಪ್ರಶಾಂತ್ ಶೆಟ್ಟಿ ಸಂಬೊಳ್ಯ ಹಾಗೂ ರಾಜೇಶ್ ಶೆಟ್ಟಿ ಉಳಗುಡ್ಡೆ ಸ್ವಾಗತಿಸಿ, ಸತ್ಕರಿಸಿ, ಕೃಷಿಕರ ಉತ್ಪನ್ನಗಳನ್ನು ಉತ್ತಮ ಬೆಲೆಯಲ್ಲಿ ಖರೀದಿಸುವುದಾಗಿ ಹೇಳಿ, ಕೃಷಿಕರ ಸಹಕಾರ ಯಾಚಿಸಿದರು.
ಅಂಚೆ ಇಲಾಖೆ ನಿವೃತ್ತ ಅಂಚೆ ಪಾಲಕರಾದ ವಿಠ್ಠಲ ಶೆಟ್ಟಿ ಉಪ್ಪಡ್ಕ ನಿರೂಪಿಸಿದರು.

Related posts

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya
error: Content is protected !!