July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ರಚಿಸಿದ್ದ ಎಸ್‌ಐಟಿ ತಂಡ ಈ ಮಾಸಾಂತ್ಯಕ್ಕೆ ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ.

ರಾಜ್ಯಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವುದಕ್ಕಾಗಿ ಸರ್ಕಾರ ಜುಲೈ 20ರಂದು ಸಿಐಡಿ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಿತ್ತು. ಗೃಹ ಇಲಾಖೆಯ ಉನ್ನತ ಮೂಲಗಳ ಪ್ರಕಾರ ಎಸ್‌ಐಟಿ ತಂಡದ ತನಿಖೆ ಈಗ ಬಹುತೇಕ ಮುಕ್ತಾಯಗೊಂಡಿದ್ದು, ಸಂಗ್ರಹಗೊಂಡ ಮಾಹಿತಿ, ವೈಜ್ಞಾನಿಕ ತನಿಖೆ, ಎಫ್‌ಎಸ್ಎಲ್ ವರದಿ ಇತ್ಯಾದಿ ಅಂಶಗಳ ವಿಶ್ಲೇಷಣೆ ಹಾಗೂ ಅಂತಿಮ ವರದಿಯ ತಯಾರಿ ನಡೆಯುತ್ತಿದೆ. ಈ ಮಾಸಾಂತ್ಯಕ್ಕೆ ಎಸ್‌ಐಟಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ತಿಳಿದುಬಂದಿದೆ.


ಮೂಲಗಳ ಪ್ರಕಾರ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಒಂದು ತಾರ್ಕಿಕ ಅಂತ್ಯ ನೀಡುತ್ತದೆ ಎಂದು ಹೇಳಲಾಗುತ್ತಿದ್ದು, ವರದಿಯ ಯಾವುದೇ ಅಂಶಗಳು ಸೋರಿಕೆಯಾಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡಲಾಗಿದೆ. ಎಸ್‌ಐಟಿ ಈ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿರುವುದರಿಂದ ಯಾವುದೇ ಆಡಳಿತಾತ್ಮಕ ಲೋಪವಾಗದಂತೆ ನೋಡಿಕೊಳ್ಳಿ ಎಂದು ಸರ್ಕಾರ ನಿರ್ದೇಶನ ನೀಡಿದೆ ಎನ್ನಲಾಗಿದೆ.

Related posts

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಾರ್ಷಿಕ ಕ್ರೀಡಾ ಕೂಟ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!