September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬಾರ್ಯ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಬಾರ್ಯ ಇದರ 2025 ರಿಂದ 2030ರ ವರೆಗಿನ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ (05.11.2025) ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಪ್ರಸನ್ನ ಗೌಡ, ಪ್ರವೀಣ್ ರೈ, ಪ್ರಶಾಂತ್ ಪೈ, ಚಂದ್ರಶೇಖರ ಕುಂಡಡ್ಕ, ಮೋಹನ್ ಗೌಡ, ಹರ್ಷಿತ್ ಕಲಾಯ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ಸೇಸಪ್ಪ ಕೋಟ್ಯಾನ್, ಹಿಂದುಳಿದ ಬಿ ಕ್ಷೇತ್ರ ದಿಂದ ರಾಜೇಶ್ ರೈ ಹೆನ್ನಡ್ಕ, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಸವಿತಾ ವೆಂಕಟೇಶ್, ಶ್ರೀಮತಿ ಹೇಮಾವತಿ ಸುರೇಶ್, ಪರಿಶಿಷ್ಟ ಜಾತಿ ಕ್ಷೇತ್ರ ದಿಂದ ಸುರೇಶ್ ಸುಣ್ಣಜೆ, ಪರಿಶಿಷ್ಟ ಪಂಗಡದಿಂದ ಶಿವರಾಮ ನಾಯ್ಕ ಕೆಳಗಿನಂಗಡಿ ಇವರುಗಳು ಬಿ.ವಿ. ಪ್ರತಿಮಾ ರಿಟರ್ನಿಂಗ್ ಅಧಿಕಾರಿಯವರಿಗೆ ಇಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿಗಳಾದ ಮಂಡಲ ಕಾರ್ಯದರ್ಶಿ ಸುಂದರ್ ಹೆಗ್ಡೆ, ಮಹೇಶ್ ಕೋಟ್ಯಾನ್ ಜೆಂಕ್ಯಾರ್
ಪುತ್ತಿಲ ಶಕ್ತಿ ಕೇಂದ್ರ ಪ್ರಮುಖರಾದ ಪ್ರವೀಣ್ ಪೂಜಾರಿ ಬೇಂಗಿಲ, ದಯಾನಂದ ಆಳ್ವ, ಪಂಚಾಯತ್ ಸದಸ್ಯರಾದ ಧರ್ಣಪ್ಪ ಗೌಡ, ವಸಂತ ಬೋಳ್ಡೆಲ್, ಕಮಲಾಕ್ಷ ಗೌಡ, ಬೂತ್ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಶಾಸಕರ ಮುತುವರ್ಜಿಯಿಂದ ಪದವು–ಬೊಳ್ಮನಾರ್ ಮುಖ್ಯರಸ್ತೆಗೆ ತುರ್ತು ದುರಸ್ತಿ; ಮಳೆಗಾಲದ ಬಳಿಕ ರೂ.30 ಲಕ್ಷ ವೆಚ್ಚದಲ್ಲಿ ಮರುಡಾಮರೀಕರಣ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya
error: Content is protected !!