September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಅ.21 ರಂದು ದೀಪಾವಳಿಯನ್ನು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ದೀಪ ಬೆಳಗಿಸುವುದರ ಮೂಲಕ ಪ್ರಾರಂಭವಾಯಿತು. ವಿದ್ಯಾರ್ಥಿನಿಯಾದ ಬಿಂದುರವರು ದೀಪಾವಳಿಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿನಿಯರು ನೃತ್ಯ, ನಾಟಕ ಪ್ರದರ್ಶಿಸುವ ಮೂಲಕ ಎಲ್ಲರನ್ನೂ ಮನರಂಜಿಸಿದರು. ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ಆಗಮಿಸಿ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ದೀಪಾವಳಿಯು ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಹಬ್ಬವಾಗಿದೆ ಎಂದು ಹೇಳಿ ಮಕ್ಕಳಿಗೆ ದೀಪಾವಳಿಯ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಮಡಂತ್ಯಾರು ಚರ್ಚ್ ಸಹಾಯಕ ಧರ್ಮಗುರುಗಳಾದ ವಂ|ಸ್ವಾ| ಲ್ಯಾರಿ ಪಿಂಟೋ , ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ರವೀಂದ್ರ ರೈ ಹಾಗೂ ಶಿಕ್ಷಕರ-ರಕ್ಷಕ ಸಂಘದ ಸದಸ್ಯ ಪ್ರವೀಣ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಎಲ್ರಿಕಾ ಮತ್ತು ಆಫ್ನಾನ್ ರವರು ನಿರೂಪಿಸಿ, ಪ್ರೀತಮ್ ಸ್ವಾಗತಿಸಿ, ಕ್ಷಮ್ಯ ಧನ್ಯವಾದವನ್ನು ಸಮರ್ಪಿಸಿದರು.

Related posts

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya
error: Content is protected !!