23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

ಶಿರ್ಲಾಲು: ಮೊಬೈಲ್ ಟವರ್ ಸರಬರಾಜು ಕಚೇರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮೊಬೈಲ್ ಟವರಲ್ಲಿ ಗಿಡಗಂಟಿ, ಬಳ್ಳಿಗಳು ಬೆಳೆದು ಮುತ್ತಿಕೊಂಡು, ಮೊಬೈಲ್ ಟವರನ್ನೇ ಬಳ್ಳಿಗಳು ನುಂಗಿ ಅಪಾಯಕ್ಕೆ ಆಹ್ವಾನ ನೀಡುವಂತಿವೆ.

ಶಿರ್ಲಾಲು ಗ್ರಾಮ ಪಂಚಾಯತ್ ನ ಪಕ್ಕದಲ್ಲಿರುವ ಮೊಬೈಲ್ ಟವರ್ ನ ಬುಡದಿಂದ ಕೊಡಿಯವರೆಗೆ ಸಂಪೂರ್ಣ ಬಳ್ಳಿಗಳು ಮುತ್ತಿಕೊಂಡಿದೆ. ಈ ರೀತಿ ಬಳ್ಳಿಗಳು ಬೆಳೆಯಲು ಸುಮಾರು ಸಮಯ ಬೇಕಾಗುತ್ತೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿದೆ ಹೋಗಿದ್ದು ಮಾತ್ರ ವಿಪರ್ಯಾಸ ಎಂದು ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ಸಮಯದಲ್ಲಿ ಶಿರ್ಲಾಲು ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಎಲ್ಲರಿಗೂ ತೊಂದರೆಯಾಗಿದೆ. ಶಿರ್ಲಾಲುವಿನ‌ ಸಾರ್ವಜನಿಕರು ಎಷ್ಟೋ ಸಲ ಅಧಿಕಾರಿಗಳಿಗೆ ನೆಟ್ವರ್ಕ್ ಸಮಸ್ಯೆಯ ಗಂಭೀರತೆ ಬಗ್ಗೆ ತಿಳಿಸಿದರು ಯಾವುದೇ ಪ್ರಯೋಜನವಾಗಲಿಲ್ಲ. ಈ ರೀತಿ ಟವರಲ್ಲಿ ಬಳ್ಳಿಗಳು ಬೆಳೆದರೆ ನೆಟ್ವರ್ಕ್ ಬರುವುದಾದರೂ ಹೇಗೆ ಎಂದು ಸಾರ್ವಜನಿಕರು ಮಾತಾಡುತ್ತಿದ್ದಾರೆ‌.

ಮೊಬೈಲ್ ಟವರ್ ಸುತ್ತ ಮರಗಳು ಬೆಳೆದಿದೆ. ಜೊತೆಗೆ ಬಳ್ಳಿಗಳ ರಾಶಿಯಿದೆ. ಆದರೂ ಇದರ ಬಗ್ಗೆ ಗಮನಹರಿಸುವವರು ಅಥವಾ ಕೇಳುವವರು ಇಲ್ಲದಾಗಿದೆ. ಜನರಿಗೆ ಪ್ರಯೋಜನವಾಗದ ಮೊಬೈಲ್ ಟವರ್ ಇದ್ದರೇನು, ಬಿಟ್ಟರೇನು ಎಂದು ಜನರು ಅಧಿಕಾರಿಗಳನ್ನು ದೂರುತ್ತಿದ್ದಾರೆ.

Related posts

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ :ಕೇಸು ದಾಖಲಿಸಿಕೊಂಡ ಧರ್ಮಸ್ಥಳ ಠಾಣಾ ಪೊಲೀಸರು

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya
error: Content is protected !!