July 23, 2026
Uncategorized

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

ಶಿರ್ಲಾಲು: ಮೊಬೈಲ್ ಟವರ್ ಸರಬರಾಜು ಕಚೇರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮೊಬೈಲ್ ಟವರಲ್ಲಿ ಗಿಡಗಂಟಿ, ಬಳ್ಳಿಗಳು ಬೆಳೆದು ಮುತ್ತಿಕೊಂಡು, ಮೊಬೈಲ್ ಟವರನ್ನೇ ಬಳ್ಳಿಗಳು ನುಂಗಿ ಅಪಾಯಕ್ಕೆ ಆಹ್ವಾನ ನೀಡುವಂತಿವೆ.

ಶಿರ್ಲಾಲು ಗ್ರಾಮ ಪಂಚಾಯತ್ ನ ಪಕ್ಕದಲ್ಲಿರುವ ಮೊಬೈಲ್ ಟವರ್ ನ ಬುಡದಿಂದ ಕೊಡಿಯವರೆಗೆ ಸಂಪೂರ್ಣ ಬಳ್ಳಿಗಳು ಮುತ್ತಿಕೊಂಡಿದೆ. ಈ ರೀತಿ ಬಳ್ಳಿಗಳು ಬೆಳೆಯಲು ಸುಮಾರು ಸಮಯ ಬೇಕಾಗುತ್ತೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿದೆ ಹೋಗಿದ್ದು ಮಾತ್ರ ವಿಪರ್ಯಾಸ ಎಂದು ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ಸಮಯದಲ್ಲಿ ಶಿರ್ಲಾಲು ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಎಲ್ಲರಿಗೂ ತೊಂದರೆಯಾಗಿದೆ. ಶಿರ್ಲಾಲುವಿನ‌ ಸಾರ್ವಜನಿಕರು ಎಷ್ಟೋ ಸಲ ಅಧಿಕಾರಿಗಳಿಗೆ ನೆಟ್ವರ್ಕ್ ಸಮಸ್ಯೆಯ ಗಂಭೀರತೆ ಬಗ್ಗೆ ತಿಳಿಸಿದರು ಯಾವುದೇ ಪ್ರಯೋಜನವಾಗಲಿಲ್ಲ. ಈ ರೀತಿ ಟವರಲ್ಲಿ ಬಳ್ಳಿಗಳು ಬೆಳೆದರೆ ನೆಟ್ವರ್ಕ್ ಬರುವುದಾದರೂ ಹೇಗೆ ಎಂದು ಸಾರ್ವಜನಿಕರು ಮಾತಾಡುತ್ತಿದ್ದಾರೆ‌.

ಮೊಬೈಲ್ ಟವರ್ ಸುತ್ತ ಮರಗಳು ಬೆಳೆದಿದೆ. ಜೊತೆಗೆ ಬಳ್ಳಿಗಳ ರಾಶಿಯಿದೆ. ಆದರೂ ಇದರ ಬಗ್ಗೆ ಗಮನಹರಿಸುವವರು ಅಥವಾ ಕೇಳುವವರು ಇಲ್ಲದಾಗಿದೆ. ಜನರಿಗೆ ಪ್ರಯೋಜನವಾಗದ ಮೊಬೈಲ್ ಟವರ್ ಇದ್ದರೇನು, ಬಿಟ್ಟರೇನು ಎಂದು ಜನರು ಅಧಿಕಾರಿಗಳನ್ನು ದೂರುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಸೆ.22ರಿಂದ ಅ.1: ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya
error: Content is protected !!