23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

ಮೂಡಬಿದ್ರೆ ಕನ್ನಡ ಭವನದಲ್ಲಿ ನಡೆದ ಶೋರಿನ್ ರ್ಯೂ ಕರಾಟೆ ಅಸೋಶಿಯೇಶನ್ (ರಿ) ಇಂಡಿಯಾ ಮತ್ತು ಎಂ.ಕೆ.ಅನಂತರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮೂಡಬಿದ್ರೆಯ ಇದರ ಆಶ್ರಯದಲ್ಲಿ ನಡೆದ 8ನೇ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಜ್ಞಾನ್ ಇವರು ಪ್ರಥಮ ಸ್ಥಾನ ಪಡೆದು ಸ್ವರ್ಣ ಪದಕವನ್ನು ಪಡೆದಿರುತ್ತಾರೆ.

ಇವರು ಬಂದಾರು ಗ್ರಾಮದ ಬೈಪಾಡಿ ದಿ| ಹರೀಶ್ ಪೂಜಾರಿ ಮತ್ತು ಶ್ರೀಮತಿ ಪ್ರೀತಿ ದಂಪತಿಯ ಸುಪುತ್ರರಾಗಿರುತ್ತಾರೆ. ಪ್ರಶಸ್ತಿ ವಿಜೇತ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್, ಟ್ರಸ್ಟಿ ಶ್ರೀಮತಿ ಬಿನುತಾ ಬಂಗೇರ ಹಾಗೂ ಇತರ ಟ್ರಸ್ಟಿಗಳು ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಕರಾಟೆ ಶಿಕ್ಷಕ ರಹಿಮಾನ್ , ನಿವೃತ್ತ ಶಿಕ್ಷಕ ಸುರೇಶ್, ಕಾಲೇಜಿನ ಉಪನ್ಯಾಸಕ ರಾಕೇಶ್ ಕುಮಾರ್, ಶೇಕ್ ರಶೀದ್ ಉಪಸ್ಥಿತರಿದ್ದರು.

Related posts

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya
error: Content is protected !!