23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

ಮೂಡಬಿದ್ರೆ ಕನ್ನಡ ಭವನದಲ್ಲಿ ನಡೆದ ಶೋರಿನ್ ರ್ಯೂ ಕರಾಟೆ ಅಸೋಶಿಯೇಶನ್ (ರಿ) ಇಂಡಿಯಾ ಮತ್ತು ಎಂ.ಕೆ.ಅನಂತರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮೂಡಬಿದ್ರೆಯ ಇದರ ಆಶ್ರಯದಲ್ಲಿ ನಡೆದ 8ನೇ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಜ್ಞಾನ್ ಇವರು ಪ್ರಥಮ ಸ್ಥಾನ ಪಡೆದು ಸ್ವರ್ಣ ಪದಕವನ್ನು ಪಡೆದಿರುತ್ತಾರೆ.

ಇವರು ಬಂದಾರು ಗ್ರಾಮದ ಬೈಪಾಡಿ ದಿ| ಹರೀಶ್ ಪೂಜಾರಿ ಮತ್ತು ಶ್ರೀಮತಿ ಪ್ರೀತಿ ದಂಪತಿಯ ಸುಪುತ್ರರಾಗಿರುತ್ತಾರೆ. ಪ್ರಶಸ್ತಿ ವಿಜೇತ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್, ಟ್ರಸ್ಟಿ ಶ್ರೀಮತಿ ಬಿನುತಾ ಬಂಗೇರ ಹಾಗೂ ಇತರ ಟ್ರಸ್ಟಿಗಳು ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಕರಾಟೆ ಶಿಕ್ಷಕ ರಹಿಮಾನ್ , ನಿವೃತ್ತ ಶಿಕ್ಷಕ ಸುರೇಶ್, ಕಾಲೇಜಿನ ಉಪನ್ಯಾಸಕ ರಾಕೇಶ್ ಕುಮಾರ್, ಶೇಕ್ ರಶೀದ್ ಉಪಸ್ಥಿತರಿದ್ದರು.

Related posts

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya
error: Content is protected !!