July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಹಾಗೂ ವಖ್ಫ್ -ಮೈನಾರಿಟಿ ಇನ್ಫೋ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕಿಗೊಳಪಟ್ಟ ಎಲ್ಲಾ ಮೊಹಲ್ಲಾಗಳ ನಾಯಕರುಗಳಿಗೆ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಗುರುವಾಯನಕೆರೆ ಸಮುದಾಯ ಭವನ ಸಭಾಂಗಣದಲ್ಲಿ ನಡೆಸಲಾಯಿತು. ತಾಲೂಕಿನ ಹಲವು ಮಸೀದಿ, ಮೊಹಲ್ಲಾದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿಯನ್ನು ಪಡೆದುಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದ.ಕ ಜಿಲ್ಲಾ ವಕ್ಫ್ ಕಾರ್ಯಾಲಯದ ಆಡಿಟರ್ ಅನ್ವರ್ ಮುಸ್ತಫ ಉಮಿದ್ ಪೋರ್ಟಲ್ ನಲ್ಲಿ ವಖ್ಫ್ ಆಸ್ತಿಗಳ ಮಾಹಿತಿ ತುಂಬುವುದರ ಬಗ್ಗೆ ವಿವರವಾಗಿ ವಿವರಿಸಿದರು. ವಖ್ಫ್-ಮೈನಾರಿ ಟಿ ಇನ್ಫೋ ಇದರ ಅಡ್ಮಿನ್ ಅಬ್ದುಲ್ ಖಾದರ್ ನಾವೂರು ಪ್ರಸ್ತಾವಿಕ ಹಾಗೂ ಸ್ವಾಗತ ಭಾಷಣ ಮಾಡಿದರು. ವೇದಿಕೆಯಲ್ಲಿ ಎಕ್ಸ್ ಮಿಲಿಟರಿ ಮಹಮ್ಮದ್ ರಫಿ, ದ.ಕ ಜಿಲ್ಲಾ ವಖ್ಫ್ ಸಲಹಾ ಸಮಿತಿಯ ಮಾಜಿ ಸದಸ್ಯರಾದ ಸಿದ್ದೀಕ್ ಕಾಜೂರು ಹಾಗೂ ಸಾಧಿಕ್ ಮಾಸ್ಟರ್ ಮಲೆಬೆಟ್ಟು
ಉಪಸ್ಥಿತರಿದ್ದರು.

ಉಮೀದ್ ಪೋರ್ಟಲ್ ಮಾಹಿತಿ ತುಂಬುವ ಬಗ್ಗೆ ಆನ್ಲೈನ್ ಡೆಮೋ ತೋರಿಸಲಾಯಿತು. ಬೆಳ್ತಂಗಡಿ ಖಿಲ್ರ್ ಜುಮಾ ಮಸೀದಿ ಅಧ್ಯಕ್ಷ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಗುರುವಾಯನಕೆರೆ ಮಸೀದಿಯ ಕಾರ್ಯದರ್ಶಿ ಹನೀಫ್, ಜಮೀಯತುಲ್ ಫಲಾಹ್ ಬೆಳ್ತಂಗಡಿ ಪೂರ್ವ ಅಧ್ಯಕ್ಷ ಅಲಿಯಬ್ಬ ಪುಲಾಬೆ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮುಖಂಡ ಕರೀಮ್ ಗೇರುಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

Related posts

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ಗುರುವಾಯನಕೆರೆಯಲ್ಲಿ ವಾಹದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ :ಜನರಲ್ಲಿ ಆತಂಕ ಸೃಷ್ಟಿ.

Suddi Udaya
error: Content is protected !!