22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನದ ವೇಳೆ ಆಗಮಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್.ಐ.ಟಿ‌ ತನಿಖೆ ಇದೀಗ ಮಹತ್ವದ ಘಟ್ಟ ತಲುಪಿದೆ. ಚಿನ್ನಯ್ಯ ತಂದಿದ್ದ ತಲೆಬುರುಡೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದ್ದು ಇದರಲ್ಲಿ ಯಾವ ರೀತಿಯಾಗಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರಕ್ಕೆ ಎಸ್.ಐ.ಟಿ ತಂಡ ಬಂದಿದ್ದು ಈ ಬಗ್ಗೆ ಮಹತ್ವದ ಸಭೆಗಳು ಎಸ್.ಐ.ಟಿ ಕಚೇರಿಯಲ್ಲಿ ಅ.25, 26ರಂದು ನಡೆಯಲಿದೆ.

ಅ.27ರಂದು ವಿಚಾರಣೆಗಾಗಿ ಹಾಜರಾಗಲು ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ಹಾಗೂ ವಿಠಲ ಗೌಡ ಅವರಿಗೆ ನೋಟೀಸ್ ನೀಡಿದೆ
ಬುರುಡೆಗೆ ಸಂಬಂಧಿಸಿದಂತೆ ಇವರ ವಿಚಾರಣೆ ನಡೆಯುವ ನಿರೀಕ್ಷೆಯಿದೆ. ಅದೇ ರೀತಿ ಚಿನ್ನಯ್ಯ ನೀಡಿದ‌ ಹೇಳಿಕೆಗಳ ಬಗ್ಗೆಯು ತನಿಖೆ ನಡೆಸುವ ಬಗ್ಗೆ ಎಸ್.ಐ.ಟಿ ಮಹತ್ವದ ನಿರ್ಧಾರಗಳನ್ನು ತೆಗದುಕೊಳ್ಳುವ ನಿರೀಕ್ಷೆಯಿದೆ.
ಒಟ್ಟಾರೆಯಾಗಿ ಎಸ್.ಐ.ಟಿ ತನಿಖೆಯಲ್ಲಿ ಮುಂದಿನ ವಾರ ಅತ್ಯಂತ ಮಹತ್ವದ ಬೆಳವಣಿಗೆಗಳು ನಡೆಯುವ ನಿರೀಕ್ಷೆಯಿದೆ.

Related posts

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!