23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನದ ವೇಳೆ ಆಗಮಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್.ಐ.ಟಿ‌ ತನಿಖೆ ಇದೀಗ ಮಹತ್ವದ ಘಟ್ಟ ತಲುಪಿದೆ. ಚಿನ್ನಯ್ಯ ತಂದಿದ್ದ ತಲೆಬುರುಡೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದ್ದು ಇದರಲ್ಲಿ ಯಾವ ರೀತಿಯಾಗಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರಕ್ಕೆ ಎಸ್.ಐ.ಟಿ ತಂಡ ಬಂದಿದ್ದು ಈ ಬಗ್ಗೆ ಮಹತ್ವದ ಸಭೆಗಳು ಎಸ್.ಐ.ಟಿ ಕಚೇರಿಯಲ್ಲಿ ಅ.25, 26ರಂದು ನಡೆಯಲಿದೆ.

ಅ.27ರಂದು ವಿಚಾರಣೆಗಾಗಿ ಹಾಜರಾಗಲು ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ಹಾಗೂ ವಿಠಲ ಗೌಡ ಅವರಿಗೆ ನೋಟೀಸ್ ನೀಡಿದೆ
ಬುರುಡೆಗೆ ಸಂಬಂಧಿಸಿದಂತೆ ಇವರ ವಿಚಾರಣೆ ನಡೆಯುವ ನಿರೀಕ್ಷೆಯಿದೆ. ಅದೇ ರೀತಿ ಚಿನ್ನಯ್ಯ ನೀಡಿದ‌ ಹೇಳಿಕೆಗಳ ಬಗ್ಗೆಯು ತನಿಖೆ ನಡೆಸುವ ಬಗ್ಗೆ ಎಸ್.ಐ.ಟಿ ಮಹತ್ವದ ನಿರ್ಧಾರಗಳನ್ನು ತೆಗದುಕೊಳ್ಳುವ ನಿರೀಕ್ಷೆಯಿದೆ.
ಒಟ್ಟಾರೆಯಾಗಿ ಎಸ್.ಐ.ಟಿ ತನಿಖೆಯಲ್ಲಿ ಮುಂದಿನ ವಾರ ಅತ್ಯಂತ ಮಹತ್ವದ ಬೆಳವಣಿಗೆಗಳು ನಡೆಯುವ ನಿರೀಕ್ಷೆಯಿದೆ.

Related posts

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ನಲ್ಲಿ ದ್ವಿತೀಯ ಸ್ಥಾನ

Suddi Udaya

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya
error: Content is protected !!