July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನದ ವೇಳೆ ಆಗಮಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್.ಐ.ಟಿ‌ ತನಿಖೆ ಇದೀಗ ಮಹತ್ವದ ಘಟ್ಟ ತಲುಪಿದೆ. ಚಿನ್ನಯ್ಯ ತಂದಿದ್ದ ತಲೆಬುರುಡೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದ್ದು ಇದರಲ್ಲಿ ಯಾವ ರೀತಿಯಾಗಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರಕ್ಕೆ ಎಸ್.ಐ.ಟಿ ತಂಡ ಬಂದಿದ್ದು ಈ ಬಗ್ಗೆ ಮಹತ್ವದ ಸಭೆಗಳು ಎಸ್.ಐ.ಟಿ ಕಚೇರಿಯಲ್ಲಿ ಅ.25, 26ರಂದು ನಡೆಯಲಿದೆ.

ಅ.27ರಂದು ವಿಚಾರಣೆಗಾಗಿ ಹಾಜರಾಗಲು ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ಹಾಗೂ ವಿಠಲ ಗೌಡ ಅವರಿಗೆ ನೋಟೀಸ್ ನೀಡಿದೆ
ಬುರುಡೆಗೆ ಸಂಬಂಧಿಸಿದಂತೆ ಇವರ ವಿಚಾರಣೆ ನಡೆಯುವ ನಿರೀಕ್ಷೆಯಿದೆ. ಅದೇ ರೀತಿ ಚಿನ್ನಯ್ಯ ನೀಡಿದ‌ ಹೇಳಿಕೆಗಳ ಬಗ್ಗೆಯು ತನಿಖೆ ನಡೆಸುವ ಬಗ್ಗೆ ಎಸ್.ಐ.ಟಿ ಮಹತ್ವದ ನಿರ್ಧಾರಗಳನ್ನು ತೆಗದುಕೊಳ್ಳುವ ನಿರೀಕ್ಷೆಯಿದೆ.
ಒಟ್ಟಾರೆಯಾಗಿ ಎಸ್.ಐ.ಟಿ ತನಿಖೆಯಲ್ಲಿ ಮುಂದಿನ ವಾರ ಅತ್ಯಂತ ಮಹತ್ವದ ಬೆಳವಣಿಗೆಗಳು ನಡೆಯುವ ನಿರೀಕ್ಷೆಯಿದೆ.

Related posts

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

Suddi Udaya

ಕುಕ್ಕೇಡಿ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya
error: Content is protected !!