March 7, 2026
ಅಭಿನಂದನೆವರದಿ

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

ಬೆಳ್ತಂಗಡಿ: ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಅವರನ್ನು ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (CBK) ತಂಡದ ವತಿಯಿಂದ ಇಂದು ಅವರ ಮನೆಗೆ ಭೇಟಿ ನೀಡಿ ಗೌರವಿಸಲಾಯಿತು.

ಕುಟುಂಬಸ್ಥರ ಸಮ್ಮುಖದಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮದಲ್ಲಿ CBK ಅಧ್ಯಕ್ಷ ಅಗಸ್ಟೀನ್ ಅವರು CBK ಪರವಾಗಿ ಜೆಸ್ವಿನ್ ಅವರಿಗೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಜೈಸನ್ ಪಟ್ಟೆರಿಲ್, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ., ಕಾರ್ಯದರ್ಶಿ ಶಿಜೋ ಜೋಸೆಫ್, ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ., ಕೋಶಾಧಿಕಾರಿ ರಂಜಿತ್ ಪಿ.ಎಸ್., ಗೌರವ ಸಲಹೆಗಾರ ಜೋಸೆಫ್ ಕೆ.ಡಿ., ಕಾರ್ಯಕಾರಿಣಿ ಸದಸ್ಯರು ಶಾಜಿ ತೋಮಸ್, ಲಿಜೋ ಚಾಕೋ ಹಾಗೂ ಸಂಘಟನೆಯ ಇತರ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೆಸ್ವಿನ್ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂಬರುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಯಶಸ್ಸು ಕೋರಿ ಶುಭಹಾರೈಸಲಾಯಿತು.

Related posts

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!