25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ರಮೇಶ್ ಇವರು ಮಾತನಾಡಿ ಮೆಹಂದಿ ಡಿಸೈನ್ನ್ನು ನಿರಂತರವಾಗಿ ಕಲಿಯಿವುದರಿಂದ ಹೆಚ್ಚು ಕೌಶಲ್ಯದ ಹೆಚ್ಚು ಆದಾಯ ಗಳಿಕೆ ಮಾಡಬಹುದು. ಸಂಸ್ಥೆಯು ಉಚಿತವಾಗಿ ನೀಡುವ ಉದ್ದೇಶವೇನಂದರೆ ಮಹಿಳೆಯರು ಇತರರಿಗೆ ಅವಲಂಬಿಸದೆ ಸ್ವಂತ ಉದ್ದಿಮೆ ಮಾಡಬೇಕು ಎನ್ನುವುದಾಗಿದೆ. ಇದರಿಂದ ಮಹಿಳೆ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬಹುದು. ಸಮಾಜದಲ್ಲಿ ಗೌರವ ಹಾಗೂ ಸ್ವಾವಲಂಬಿ ಬದುಕನ್ನು ಕಾಣಬಹುದು. ಈ ತರಬೇತಿಯು ಯಾವುದೇ ಬಂಡವಾಳ ಇಲ್ಲದೆ ಸಂಪಾದನೆ ಮಾಡುವ ಸ್ವಉದ್ಯೋಗವಾಗಿದೆ ಎಂದರು.

ಇವರು ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.
ಒಟ್ಟು 27 ಮಂದಿ ಯೋಜನೆಯ ಪಾಲುದಾರ ಬಂಧುಗಳು ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಕು. ಹರ್ಷಿತಾ ಇವರು ತರಗತಿ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ತರಬೇತಿ ಸಂಯೋಜಕರಾದ ಜಯಶ್ರೀ ಕಾರ್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!