25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

ಮೂಡಬಿದ್ರೆ ಕನ್ನಡ ಭವನದಲ್ಲಿ ನಡೆದ ಶೋರಿನ್ ರ್ಯೂ ಕರಾಟೆ ಅಸೋಶಿಯೇಶನ್ (ರಿ) ಇಂಡಿಯಾ ಮತ್ತು ಎಂ.ಕೆ.ಅನಂತರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮೂಡಬಿದ್ರೆಯ ಇದರ ಆಶ್ರಯದಲ್ಲಿ ನಡೆದ 8ನೇ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಜ್ಞಾನ್ ಇವರು ಪ್ರಥಮ ಸ್ಥಾನ ಪಡೆದು ಸ್ವರ್ಣ ಪದಕವನ್ನು ಪಡೆದಿರುತ್ತಾರೆ.

ಇವರು ಬಂದಾರು ಗ್ರಾಮದ ಬೈಪಾಡಿ ದಿ| ಹರೀಶ್ ಪೂಜಾರಿ ಮತ್ತು ಶ್ರೀಮತಿ ಪ್ರೀತಿ ದಂಪತಿಯ ಸುಪುತ್ರರಾಗಿರುತ್ತಾರೆ. ಪ್ರಶಸ್ತಿ ವಿಜೇತ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್, ಟ್ರಸ್ಟಿ ಶ್ರೀಮತಿ ಬಿನುತಾ ಬಂಗೇರ ಹಾಗೂ ಇತರ ಟ್ರಸ್ಟಿಗಳು ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಕರಾಟೆ ಶಿಕ್ಷಕ ರಹಿಮಾನ್ , ನಿವೃತ್ತ ಶಿಕ್ಷಕ ಸುರೇಶ್, ಕಾಲೇಜಿನ ಉಪನ್ಯಾಸಕ ರಾಕೇಶ್ ಕುಮಾರ್, ಶೇಕ್ ರಶೀದ್ ಉಪಸ್ಥಿತರಿದ್ದರು.

Related posts

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅನುಗ್ರಹ  ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!