22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಭವಿಷ್ಯವನ್ನು ಪ್ರಜ್ವಲಿಸುವಂತೆ ಮಾಡುತ್ತದೆ. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲರಿಗೂ ಪ್ರೇರಣಾದಾಯಕರಾಗಿದ್ದು, ಬದುಕಿನಲ್ಲಿ ಸರಿಯಾದ ಅನುಕರಣೀಯ ವ್ಯಕ್ತಿಗಳನ್ನು ಆಯ್ದುಕೊಳ್ಳಿ. ನಾಲ್ಕು ವರ್ಷದ ಶೈಕ್ಷಣಿಕ ಜೀವನವನ್ನು ಸದುಪಯೋಗ ಪಡಿಸಿಕೊಳ್ಳುವುದರ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ತಮಿಳುನಾಡಿನ ಇಸ್ಕಾನ್ ದೇವಾಲಯದ ನಿರ್ದೇಶಕರಾದ ಶ್ರೀರಾಮ್ ಚರಣ್ ಅರವಿಂದ ದಾಸ ಸ್ವಾಮಿಗಳು ನುಡಿದರು.

ಅವರು ಅ.25ರಂದು ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಜರುಗಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್. ಮಾತನಾಡಿ, ಪೋಷಕರ ಕನಸನ್ನು ಈಡೇರಿಸುವ ಜವಾಬ್ದಾರಿ ವಿದ್ಯಾರ್ಥಿಗಳದ್ದಾಗಿದ್ದು, ಶೈಕ್ಷಣಿಕ ವರ್ಷವನ್ನು ಹಾಳುಗೆಡದೆ ಸದುಪಯೋಗ ಪಡಿಸಿಕೊಳ್ಳಿ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಶಿಕ್ಷಣದ ಕೌಶಲ್ಯ ಮಾತ್ರವಲ್ಲದೆ, ಜೀವನ ಮೌಲ್ಯವನ್ನು ಕೂಡ ಕಲಿಸುತ್ತದೆ ಎಂದರು.

ವೇದಿಕೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಪ್ತರಾದ ಡಾ.ಹರೀಶ್, ಕಾಲೇಜು ಪ್ರಾಂಶುಪಾಲರಾದ ಅಶೋಕ್ ಕುಮಾರ್ ಟಿ., ಉಪನ್ಯಾಸಕರಾದ ಡಾ.ರವೀಶ್ ಪಡುಮಲೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಯುವರಾಜ ಪೂವಣಿ, ಎಸ್.ಡಿ.ಎಂ ಡಿಪ್ಲೊಮಾ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಕುಮಾರ್, ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ, ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ್, ಎಸ್.ಡಿ.ಎಂ ಪಿಜಿ ಕಾಲೇಜಿನ ಡೀನ್ ಡಾ. ಸೌಮ್ಯ, ಎಸ್.ಎನ್. ಕಾಕತ್ಕರ್, ಉಪನ್ಯಾಸಕರಾದ ಡಾ.ಮಧುಸೂಧನ್, ಡಾ.ಸತ್ಯನಾರಾಯಣ ಭಟ್, ಡಾ.ತ್ಯಾಗರಾಜ್, ಡಾ.ಬಸವ, ಡಾ. ಸಂದೀಪ್, ಸಹ ಉಪನ್ಯಾಸಕರು, ನೂತನ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಅಶೋಕ್ ಕುಮಾರ್ ಟಿ. ಪ್ರಸ್ತಾವಿಸಿ ಸ್ವಾಗತಿಸಿದರು. ಡಾ. ವಿದ್ಯಾ ಹಾಗೂ ರಕ್ಷಿತ್ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕ ಡಾ. ರವೀಶ್ ಪಡುಮಲೆ ವಂದಿಸಿದರು.

Related posts

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಪಿ.ವಿ. ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya
error: Content is protected !!