27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಹಾಗೂ ವಖ್ಫ್ -ಮೈನಾರಿಟಿ ಇನ್ಫೋ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕಿಗೊಳಪಟ್ಟ ಎಲ್ಲಾ ಮೊಹಲ್ಲಾಗಳ ನಾಯಕರುಗಳಿಗೆ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಗುರುವಾಯನಕೆರೆ ಸಮುದಾಯ ಭವನ ಸಭಾಂಗಣದಲ್ಲಿ ನಡೆಸಲಾಯಿತು. ತಾಲೂಕಿನ ಹಲವು ಮಸೀದಿ, ಮೊಹಲ್ಲಾದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿಯನ್ನು ಪಡೆದುಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದ.ಕ ಜಿಲ್ಲಾ ವಕ್ಫ್ ಕಾರ್ಯಾಲಯದ ಆಡಿಟರ್ ಅನ್ವರ್ ಮುಸ್ತಫ ಉಮಿದ್ ಪೋರ್ಟಲ್ ನಲ್ಲಿ ವಖ್ಫ್ ಆಸ್ತಿಗಳ ಮಾಹಿತಿ ತುಂಬುವುದರ ಬಗ್ಗೆ ವಿವರವಾಗಿ ವಿವರಿಸಿದರು. ವಖ್ಫ್-ಮೈನಾರಿ ಟಿ ಇನ್ಫೋ ಇದರ ಅಡ್ಮಿನ್ ಅಬ್ದುಲ್ ಖಾದರ್ ನಾವೂರು ಪ್ರಸ್ತಾವಿಕ ಹಾಗೂ ಸ್ವಾಗತ ಭಾಷಣ ಮಾಡಿದರು. ವೇದಿಕೆಯಲ್ಲಿ ಎಕ್ಸ್ ಮಿಲಿಟರಿ ಮಹಮ್ಮದ್ ರಫಿ, ದ.ಕ ಜಿಲ್ಲಾ ವಖ್ಫ್ ಸಲಹಾ ಸಮಿತಿಯ ಮಾಜಿ ಸದಸ್ಯರಾದ ಸಿದ್ದೀಕ್ ಕಾಜೂರು ಹಾಗೂ ಸಾಧಿಕ್ ಮಾಸ್ಟರ್ ಮಲೆಬೆಟ್ಟು
ಉಪಸ್ಥಿತರಿದ್ದರು.

ಉಮೀದ್ ಪೋರ್ಟಲ್ ಮಾಹಿತಿ ತುಂಬುವ ಬಗ್ಗೆ ಆನ್ಲೈನ್ ಡೆಮೋ ತೋರಿಸಲಾಯಿತು. ಬೆಳ್ತಂಗಡಿ ಖಿಲ್ರ್ ಜುಮಾ ಮಸೀದಿ ಅಧ್ಯಕ್ಷ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಗುರುವಾಯನಕೆರೆ ಮಸೀದಿಯ ಕಾರ್ಯದರ್ಶಿ ಹನೀಫ್, ಜಮೀಯತುಲ್ ಫಲಾಹ್ ಬೆಳ್ತಂಗಡಿ ಪೂರ್ವ ಅಧ್ಯಕ್ಷ ಅಲಿಯಬ್ಬ ಪುಲಾಬೆ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮುಖಂಡ ಕರೀಮ್ ಗೇರುಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya
error: Content is protected !!