22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಹಾಗೂ ವಖ್ಫ್ -ಮೈನಾರಿಟಿ ಇನ್ಫೋ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕಿಗೊಳಪಟ್ಟ ಎಲ್ಲಾ ಮೊಹಲ್ಲಾಗಳ ನಾಯಕರುಗಳಿಗೆ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಗುರುವಾಯನಕೆರೆ ಸಮುದಾಯ ಭವನ ಸಭಾಂಗಣದಲ್ಲಿ ನಡೆಸಲಾಯಿತು. ತಾಲೂಕಿನ ಹಲವು ಮಸೀದಿ, ಮೊಹಲ್ಲಾದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿಯನ್ನು ಪಡೆದುಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದ.ಕ ಜಿಲ್ಲಾ ವಕ್ಫ್ ಕಾರ್ಯಾಲಯದ ಆಡಿಟರ್ ಅನ್ವರ್ ಮುಸ್ತಫ ಉಮಿದ್ ಪೋರ್ಟಲ್ ನಲ್ಲಿ ವಖ್ಫ್ ಆಸ್ತಿಗಳ ಮಾಹಿತಿ ತುಂಬುವುದರ ಬಗ್ಗೆ ವಿವರವಾಗಿ ವಿವರಿಸಿದರು. ವಖ್ಫ್-ಮೈನಾರಿ ಟಿ ಇನ್ಫೋ ಇದರ ಅಡ್ಮಿನ್ ಅಬ್ದುಲ್ ಖಾದರ್ ನಾವೂರು ಪ್ರಸ್ತಾವಿಕ ಹಾಗೂ ಸ್ವಾಗತ ಭಾಷಣ ಮಾಡಿದರು. ವೇದಿಕೆಯಲ್ಲಿ ಎಕ್ಸ್ ಮಿಲಿಟರಿ ಮಹಮ್ಮದ್ ರಫಿ, ದ.ಕ ಜಿಲ್ಲಾ ವಖ್ಫ್ ಸಲಹಾ ಸಮಿತಿಯ ಮಾಜಿ ಸದಸ್ಯರಾದ ಸಿದ್ದೀಕ್ ಕಾಜೂರು ಹಾಗೂ ಸಾಧಿಕ್ ಮಾಸ್ಟರ್ ಮಲೆಬೆಟ್ಟು
ಉಪಸ್ಥಿತರಿದ್ದರು.

ಉಮೀದ್ ಪೋರ್ಟಲ್ ಮಾಹಿತಿ ತುಂಬುವ ಬಗ್ಗೆ ಆನ್ಲೈನ್ ಡೆಮೋ ತೋರಿಸಲಾಯಿತು. ಬೆಳ್ತಂಗಡಿ ಖಿಲ್ರ್ ಜುಮಾ ಮಸೀದಿ ಅಧ್ಯಕ್ಷ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಗುರುವಾಯನಕೆರೆ ಮಸೀದಿಯ ಕಾರ್ಯದರ್ಶಿ ಹನೀಫ್, ಜಮೀಯತುಲ್ ಫಲಾಹ್ ಬೆಳ್ತಂಗಡಿ ಪೂರ್ವ ಅಧ್ಯಕ್ಷ ಅಲಿಯಬ್ಬ ಪುಲಾಬೆ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮುಖಂಡ ಕರೀಮ್ ಗೇರುಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನ್ಯಾಯಕ್ಕಾಗಿ ಎಸ್ಸೆಸ್ಸೆಫ್ ವತಿಯಿಂದ ವಿದ್ಯಾರ್ಥಿ ರ‍್ಯಾಲಿ ಹಾಗೂ ಪ್ರತಿಭಟನೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya
error: Content is protected !!