September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಹಾಗೂ ವಖ್ಫ್ -ಮೈನಾರಿಟಿ ಇನ್ಫೋ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕಿಗೊಳಪಟ್ಟ ಎಲ್ಲಾ ಮೊಹಲ್ಲಾಗಳ ನಾಯಕರುಗಳಿಗೆ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಗುರುವಾಯನಕೆರೆ ಸಮುದಾಯ ಭವನ ಸಭಾಂಗಣದಲ್ಲಿ ನಡೆಸಲಾಯಿತು. ತಾಲೂಕಿನ ಹಲವು ಮಸೀದಿ, ಮೊಹಲ್ಲಾದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿಯನ್ನು ಪಡೆದುಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದ.ಕ ಜಿಲ್ಲಾ ವಕ್ಫ್ ಕಾರ್ಯಾಲಯದ ಆಡಿಟರ್ ಅನ್ವರ್ ಮುಸ್ತಫ ಉಮಿದ್ ಪೋರ್ಟಲ್ ನಲ್ಲಿ ವಖ್ಫ್ ಆಸ್ತಿಗಳ ಮಾಹಿತಿ ತುಂಬುವುದರ ಬಗ್ಗೆ ವಿವರವಾಗಿ ವಿವರಿಸಿದರು. ವಖ್ಫ್-ಮೈನಾರಿ ಟಿ ಇನ್ಫೋ ಇದರ ಅಡ್ಮಿನ್ ಅಬ್ದುಲ್ ಖಾದರ್ ನಾವೂರು ಪ್ರಸ್ತಾವಿಕ ಹಾಗೂ ಸ್ವಾಗತ ಭಾಷಣ ಮಾಡಿದರು. ವೇದಿಕೆಯಲ್ಲಿ ಎಕ್ಸ್ ಮಿಲಿಟರಿ ಮಹಮ್ಮದ್ ರಫಿ, ದ.ಕ ಜಿಲ್ಲಾ ವಖ್ಫ್ ಸಲಹಾ ಸಮಿತಿಯ ಮಾಜಿ ಸದಸ್ಯರಾದ ಸಿದ್ದೀಕ್ ಕಾಜೂರು ಹಾಗೂ ಸಾಧಿಕ್ ಮಾಸ್ಟರ್ ಮಲೆಬೆಟ್ಟು
ಉಪಸ್ಥಿತರಿದ್ದರು.

ಉಮೀದ್ ಪೋರ್ಟಲ್ ಮಾಹಿತಿ ತುಂಬುವ ಬಗ್ಗೆ ಆನ್ಲೈನ್ ಡೆಮೋ ತೋರಿಸಲಾಯಿತು. ಬೆಳ್ತಂಗಡಿ ಖಿಲ್ರ್ ಜುಮಾ ಮಸೀದಿ ಅಧ್ಯಕ್ಷ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಗುರುವಾಯನಕೆರೆ ಮಸೀದಿಯ ಕಾರ್ಯದರ್ಶಿ ಹನೀಫ್, ಜಮೀಯತುಲ್ ಫಲಾಹ್ ಬೆಳ್ತಂಗಡಿ ಪೂರ್ವ ಅಧ್ಯಕ್ಷ ಅಲಿಯಬ್ಬ ಪುಲಾಬೆ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮುಖಂಡ ಕರೀಮ್ ಗೇರುಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಎರಡೂ ಜನರೇಟರ್ ಇದ್ದೂ ಯಾವುದೇ ಪ್ರಯೋಜನಕ್ಕಿಲ್ಲ: ಜನರು ಅಗತ್ಯ ಕೆಲಸಕ್ಕಾಗಿ ಕಾದು ವಾಪಸ್ ಹೋಗಬೇಕಾದ ಪರಿಸ್ಥಿತಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

Suddi Udaya

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

Suddi Udaya
error: Content is protected !!