23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನದ ವೇಳೆ ಆಗಮಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್.ಐ.ಟಿ‌ ತನಿಖೆ ಇದೀಗ ಮಹತ್ವದ ಘಟ್ಟ ತಲುಪಿದೆ. ಚಿನ್ನಯ್ಯ ತಂದಿದ್ದ ತಲೆಬುರುಡೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದ್ದು ಇದರಲ್ಲಿ ಯಾವ ರೀತಿಯಾಗಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರಕ್ಕೆ ಎಸ್.ಐ.ಟಿ ತಂಡ ಬಂದಿದ್ದು ಈ ಬಗ್ಗೆ ಮಹತ್ವದ ಸಭೆಗಳು ಎಸ್.ಐ.ಟಿ ಕಚೇರಿಯಲ್ಲಿ ಅ.25, 26ರಂದು ನಡೆಯಲಿದೆ.

ಅ.27ರಂದು ವಿಚಾರಣೆಗಾಗಿ ಹಾಜರಾಗಲು ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ಹಾಗೂ ವಿಠಲ ಗೌಡ ಅವರಿಗೆ ನೋಟೀಸ್ ನೀಡಿದೆ
ಬುರುಡೆಗೆ ಸಂಬಂಧಿಸಿದಂತೆ ಇವರ ವಿಚಾರಣೆ ನಡೆಯುವ ನಿರೀಕ್ಷೆಯಿದೆ. ಅದೇ ರೀತಿ ಚಿನ್ನಯ್ಯ ನೀಡಿದ‌ ಹೇಳಿಕೆಗಳ ಬಗ್ಗೆಯು ತನಿಖೆ ನಡೆಸುವ ಬಗ್ಗೆ ಎಸ್.ಐ.ಟಿ ಮಹತ್ವದ ನಿರ್ಧಾರಗಳನ್ನು ತೆಗದುಕೊಳ್ಳುವ ನಿರೀಕ್ಷೆಯಿದೆ.
ಒಟ್ಟಾರೆಯಾಗಿ ಎಸ್.ಐ.ಟಿ ತನಿಖೆಯಲ್ಲಿ ಮುಂದಿನ ವಾರ ಅತ್ಯಂತ ಮಹತ್ವದ ಬೆಳವಣಿಗೆಗಳು ನಡೆಯುವ ನಿರೀಕ್ಷೆಯಿದೆ.

Related posts

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ : ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಪ್ರಥಮ ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

Suddi Udaya
error: Content is protected !!