22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನದ ವೇಳೆ ಆಗಮಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್.ಐ.ಟಿ‌ ತನಿಖೆ ಇದೀಗ ಮಹತ್ವದ ಘಟ್ಟ ತಲುಪಿದೆ. ಚಿನ್ನಯ್ಯ ತಂದಿದ್ದ ತಲೆಬುರುಡೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದ್ದು ಇದರಲ್ಲಿ ಯಾವ ರೀತಿಯಾಗಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರಕ್ಕೆ ಎಸ್.ಐ.ಟಿ ತಂಡ ಬಂದಿದ್ದು ಈ ಬಗ್ಗೆ ಮಹತ್ವದ ಸಭೆಗಳು ಎಸ್.ಐ.ಟಿ ಕಚೇರಿಯಲ್ಲಿ ಅ.25, 26ರಂದು ನಡೆಯಲಿದೆ.

ಅ.27ರಂದು ವಿಚಾರಣೆಗಾಗಿ ಹಾಜರಾಗಲು ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ಹಾಗೂ ವಿಠಲ ಗೌಡ ಅವರಿಗೆ ನೋಟೀಸ್ ನೀಡಿದೆ
ಬುರುಡೆಗೆ ಸಂಬಂಧಿಸಿದಂತೆ ಇವರ ವಿಚಾರಣೆ ನಡೆಯುವ ನಿರೀಕ್ಷೆಯಿದೆ. ಅದೇ ರೀತಿ ಚಿನ್ನಯ್ಯ ನೀಡಿದ‌ ಹೇಳಿಕೆಗಳ ಬಗ್ಗೆಯು ತನಿಖೆ ನಡೆಸುವ ಬಗ್ಗೆ ಎಸ್.ಐ.ಟಿ ಮಹತ್ವದ ನಿರ್ಧಾರಗಳನ್ನು ತೆಗದುಕೊಳ್ಳುವ ನಿರೀಕ್ಷೆಯಿದೆ.
ಒಟ್ಟಾರೆಯಾಗಿ ಎಸ್.ಐ.ಟಿ ತನಿಖೆಯಲ್ಲಿ ಮುಂದಿನ ವಾರ ಅತ್ಯಂತ ಮಹತ್ವದ ಬೆಳವಣಿಗೆಗಳು ನಡೆಯುವ ನಿರೀಕ್ಷೆಯಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ಸೋಮಂತಡ್ಕ: ರಿಕ್ಷಾ ಹಾಗೂ ಜೀಪ್ ನಡುವೆ ಅಪಘಾತ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!