25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ಒಂದು ದಿನದ ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳ ತಂಡ ಆಸ್ಪತ್ರೆಯ ಸುತ್ತಮುತ್ತಲಿನ ಪರಿಸರದ ಸ್ವಚ್ಛತಾ ಕೆಲಸ ಮಾಡಿ ಅಲ್ಲಿನ ಸಾರ್ವಜನಿಕರ ಪ್ರಶಂಸೆಗೆ ಕಾರಣಿಭೂತರಾದರು. ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ವರ್ಗದವರು ಸಹ ಈ ಶಿಬಿರದಲ್ಲಿ ವಿದ್ಯಾರ್ಥಿಗಳೊಡನೆ ಕೈ ಜೋಡಿಸಿದರು.

ಸ್ವಚ್ಛತಾ ಶಿಬಿರದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಪದ್ಮನಾಭ ಕೆ, ವಾಣಿಜ್ಯ ಸಂಘದ ಸಂಚಾಲಕರಾದ ಪ್ರೊ. ನವೀನ್, ಯುವ ರೆಡ್ ಕ್ರಾಸ್ ಹಾಗೂ ರೇಂಜರ್ಸ್ ಘಟಕದ ಅಧಿಕಾರಿ ಡಾ. ರಾಜೇಶ್ವರಿ ಎಚ್ ಎಸ್, ಇಂಗ್ಲಿಷ್ ವಿಭಾಗದ ಪ್ರೊ. ಸುರೇಶ್ ಡಿ. ಭಾಗವಹಿಸಿದ್ದರು. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆಗೆ ಉಪಸ್ಥಿತರಿದ್ದು ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

Suddi Udaya
error: Content is protected !!