23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆವರದಿ

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

ಬೆಳ್ತಂಗಡಿ: ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಅವರನ್ನು ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (CBK) ತಂಡದ ವತಿಯಿಂದ ಇಂದು ಅವರ ಮನೆಗೆ ಭೇಟಿ ನೀಡಿ ಗೌರವಿಸಲಾಯಿತು.

ಕುಟುಂಬಸ್ಥರ ಸಮ್ಮುಖದಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮದಲ್ಲಿ CBK ಅಧ್ಯಕ್ಷ ಅಗಸ್ಟೀನ್ ಅವರು CBK ಪರವಾಗಿ ಜೆಸ್ವಿನ್ ಅವರಿಗೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಜೈಸನ್ ಪಟ್ಟೆರಿಲ್, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ., ಕಾರ್ಯದರ್ಶಿ ಶಿಜೋ ಜೋಸೆಫ್, ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ., ಕೋಶಾಧಿಕಾರಿ ರಂಜಿತ್ ಪಿ.ಎಸ್., ಗೌರವ ಸಲಹೆಗಾರ ಜೋಸೆಫ್ ಕೆ.ಡಿ., ಕಾರ್ಯಕಾರಿಣಿ ಸದಸ್ಯರು ಶಾಜಿ ತೋಮಸ್, ಲಿಜೋ ಚಾಕೋ ಹಾಗೂ ಸಂಘಟನೆಯ ಇತರ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೆಸ್ವಿನ್ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂಬರುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಯಶಸ್ಸು ಕೋರಿ ಶುಭಹಾರೈಸಲಾಯಿತು.

Related posts

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya
error: Content is protected !!