July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ರಮೇಶ್ ಇವರು ಮಾತನಾಡಿ ಮೆಹಂದಿ ಡಿಸೈನ್ನ್ನು ನಿರಂತರವಾಗಿ ಕಲಿಯಿವುದರಿಂದ ಹೆಚ್ಚು ಕೌಶಲ್ಯದ ಹೆಚ್ಚು ಆದಾಯ ಗಳಿಕೆ ಮಾಡಬಹುದು. ಸಂಸ್ಥೆಯು ಉಚಿತವಾಗಿ ನೀಡುವ ಉದ್ದೇಶವೇನಂದರೆ ಮಹಿಳೆಯರು ಇತರರಿಗೆ ಅವಲಂಬಿಸದೆ ಸ್ವಂತ ಉದ್ದಿಮೆ ಮಾಡಬೇಕು ಎನ್ನುವುದಾಗಿದೆ. ಇದರಿಂದ ಮಹಿಳೆ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬಹುದು. ಸಮಾಜದಲ್ಲಿ ಗೌರವ ಹಾಗೂ ಸ್ವಾವಲಂಬಿ ಬದುಕನ್ನು ಕಾಣಬಹುದು. ಈ ತರಬೇತಿಯು ಯಾವುದೇ ಬಂಡವಾಳ ಇಲ್ಲದೆ ಸಂಪಾದನೆ ಮಾಡುವ ಸ್ವಉದ್ಯೋಗವಾಗಿದೆ ಎಂದರು.

ಇವರು ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.
ಒಟ್ಟು 27 ಮಂದಿ ಯೋಜನೆಯ ಪಾಲುದಾರ ಬಂಧುಗಳು ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಕು. ಹರ್ಷಿತಾ ಇವರು ತರಗತಿ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ತರಬೇತಿ ಸಂಯೋಜಕರಾದ ಜಯಶ್ರೀ ಕಾರ್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya
error: Content is protected !!