July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

ಮೂಡಬಿದ್ರೆ ಕನ್ನಡ ಭವನದಲ್ಲಿ ನಡೆದ ಶೋರಿನ್ ರ್ಯೂ ಕರಾಟೆ ಅಸೋಶಿಯೇಶನ್ (ರಿ) ಇಂಡಿಯಾ ಮತ್ತು ಎಂ.ಕೆ.ಅನಂತರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮೂಡಬಿದ್ರೆಯ ಇದರ ಆಶ್ರಯದಲ್ಲಿ ನಡೆದ 8ನೇ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಜ್ಞಾನ್ ಇವರು ಪ್ರಥಮ ಸ್ಥಾನ ಪಡೆದು ಸ್ವರ್ಣ ಪದಕವನ್ನು ಪಡೆದಿರುತ್ತಾರೆ.

ಇವರು ಬಂದಾರು ಗ್ರಾಮದ ಬೈಪಾಡಿ ದಿ| ಹರೀಶ್ ಪೂಜಾರಿ ಮತ್ತು ಶ್ರೀಮತಿ ಪ್ರೀತಿ ದಂಪತಿಯ ಸುಪುತ್ರರಾಗಿರುತ್ತಾರೆ. ಪ್ರಶಸ್ತಿ ವಿಜೇತ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್, ಟ್ರಸ್ಟಿ ಶ್ರೀಮತಿ ಬಿನುತಾ ಬಂಗೇರ ಹಾಗೂ ಇತರ ಟ್ರಸ್ಟಿಗಳು ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಕರಾಟೆ ಶಿಕ್ಷಕ ರಹಿಮಾನ್ , ನಿವೃತ್ತ ಶಿಕ್ಷಕ ಸುರೇಶ್, ಕಾಲೇಜಿನ ಉಪನ್ಯಾಸಕ ರಾಕೇಶ್ ಕುಮಾರ್, ಶೇಕ್ ರಶೀದ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೇ 14-22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya
error: Content is protected !!