23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

ಮೂಡಬಿದ್ರೆ ಕನ್ನಡ ಭವನದಲ್ಲಿ ನಡೆದ ಶೋರಿನ್ ರ್ಯೂ ಕರಾಟೆ ಅಸೋಶಿಯೇಶನ್ (ರಿ) ಇಂಡಿಯಾ ಮತ್ತು ಎಂ.ಕೆ.ಅನಂತರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮೂಡಬಿದ್ರೆಯ ಇದರ ಆಶ್ರಯದಲ್ಲಿ ನಡೆದ 8ನೇ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಜ್ಞಾನ್ ಇವರು ಪ್ರಥಮ ಸ್ಥಾನ ಪಡೆದು ಸ್ವರ್ಣ ಪದಕವನ್ನು ಪಡೆದಿರುತ್ತಾರೆ.

ಇವರು ಬಂದಾರು ಗ್ರಾಮದ ಬೈಪಾಡಿ ದಿ| ಹರೀಶ್ ಪೂಜಾರಿ ಮತ್ತು ಶ್ರೀಮತಿ ಪ್ರೀತಿ ದಂಪತಿಯ ಸುಪುತ್ರರಾಗಿರುತ್ತಾರೆ. ಪ್ರಶಸ್ತಿ ವಿಜೇತ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್, ಟ್ರಸ್ಟಿ ಶ್ರೀಮತಿ ಬಿನುತಾ ಬಂಗೇರ ಹಾಗೂ ಇತರ ಟ್ರಸ್ಟಿಗಳು ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಕರಾಟೆ ಶಿಕ್ಷಕ ರಹಿಮಾನ್ , ನಿವೃತ್ತ ಶಿಕ್ಷಕ ಸುರೇಶ್, ಕಾಲೇಜಿನ ಉಪನ್ಯಾಸಕ ರಾಕೇಶ್ ಕುಮಾರ್, ಶೇಕ್ ರಶೀದ್ ಉಪಸ್ಥಿತರಿದ್ದರು.

Related posts

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya
error: Content is protected !!