ಗ್ರಾಮಾಂತರ ಸುದ್ದಿಚಿತ್ರ ವರದಿ

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

ಮೂಡಬಿದ್ರೆ ಕನ್ನಡ ಭವನದಲ್ಲಿ ನಡೆದ ಶೋರಿನ್ ರ್ಯೂ ಕರಾಟೆ ಅಸೋಶಿಯೇಶನ್ (ರಿ) ಇಂಡಿಯಾ ಮತ್ತು ಎಂ.ಕೆ.ಅನಂತರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮೂಡಬಿದ್ರೆಯ ಇದರ ಆಶ್ರಯದಲ್ಲಿ ನಡೆದ 8ನೇ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಜ್ಞಾನ್ ಇವರು ಪ್ರಥಮ ಸ್ಥಾನ ಪಡೆದು ಸ್ವರ್ಣ ಪದಕವನ್ನು ಪಡೆದಿರುತ್ತಾರೆ.

ಇವರು ಬಂದಾರು ಗ್ರಾಮದ ಬೈಪಾಡಿ ದಿ| ಹರೀಶ್ ಪೂಜಾರಿ ಮತ್ತು ಶ್ರೀಮತಿ ಪ್ರೀತಿ ದಂಪತಿಯ ಸುಪುತ್ರರಾಗಿರುತ್ತಾರೆ. ಪ್ರಶಸ್ತಿ ವಿಜೇತ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್, ಟ್ರಸ್ಟಿ ಶ್ರೀಮತಿ ಬಿನುತಾ ಬಂಗೇರ ಹಾಗೂ ಇತರ ಟ್ರಸ್ಟಿಗಳು ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಕರಾಟೆ ಶಿಕ್ಷಕ ರಹಿಮಾನ್ , ನಿವೃತ್ತ ಶಿಕ್ಷಕ ಸುರೇಶ್, ಕಾಲೇಜಿನ ಉಪನ್ಯಾಸಕ ರಾಕೇಶ್ ಕುಮಾರ್, ಶೇಕ್ ರಶೀದ್ ಉಪಸ್ಥಿತರಿದ್ದರು.

Related posts

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ ಎಲ್.ಪಿ.ಜಿ/ಸಿ.ಎನ್.ಜಿ. ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

Suddi Udaya

ಪಿಯುಸಿ ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್

Suddi Udaya
error: Content is protected !!