23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಹಾಗೂ ವಖ್ಫ್ -ಮೈನಾರಿಟಿ ಇನ್ಫೋ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕಿಗೊಳಪಟ್ಟ ಎಲ್ಲಾ ಮೊಹಲ್ಲಾಗಳ ನಾಯಕರುಗಳಿಗೆ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಗುರುವಾಯನಕೆರೆ ಸಮುದಾಯ ಭವನ ಸಭಾಂಗಣದಲ್ಲಿ ನಡೆಸಲಾಯಿತು. ತಾಲೂಕಿನ ಹಲವು ಮಸೀದಿ, ಮೊಹಲ್ಲಾದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿಯನ್ನು ಪಡೆದುಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದ.ಕ ಜಿಲ್ಲಾ ವಕ್ಫ್ ಕಾರ್ಯಾಲಯದ ಆಡಿಟರ್ ಅನ್ವರ್ ಮುಸ್ತಫ ಉಮಿದ್ ಪೋರ್ಟಲ್ ನಲ್ಲಿ ವಖ್ಫ್ ಆಸ್ತಿಗಳ ಮಾಹಿತಿ ತುಂಬುವುದರ ಬಗ್ಗೆ ವಿವರವಾಗಿ ವಿವರಿಸಿದರು. ವಖ್ಫ್-ಮೈನಾರಿ ಟಿ ಇನ್ಫೋ ಇದರ ಅಡ್ಮಿನ್ ಅಬ್ದುಲ್ ಖಾದರ್ ನಾವೂರು ಪ್ರಸ್ತಾವಿಕ ಹಾಗೂ ಸ್ವಾಗತ ಭಾಷಣ ಮಾಡಿದರು. ವೇದಿಕೆಯಲ್ಲಿ ಎಕ್ಸ್ ಮಿಲಿಟರಿ ಮಹಮ್ಮದ್ ರಫಿ, ದ.ಕ ಜಿಲ್ಲಾ ವಖ್ಫ್ ಸಲಹಾ ಸಮಿತಿಯ ಮಾಜಿ ಸದಸ್ಯರಾದ ಸಿದ್ದೀಕ್ ಕಾಜೂರು ಹಾಗೂ ಸಾಧಿಕ್ ಮಾಸ್ಟರ್ ಮಲೆಬೆಟ್ಟು
ಉಪಸ್ಥಿತರಿದ್ದರು.

ಉಮೀದ್ ಪೋರ್ಟಲ್ ಮಾಹಿತಿ ತುಂಬುವ ಬಗ್ಗೆ ಆನ್ಲೈನ್ ಡೆಮೋ ತೋರಿಸಲಾಯಿತು. ಬೆಳ್ತಂಗಡಿ ಖಿಲ್ರ್ ಜುಮಾ ಮಸೀದಿ ಅಧ್ಯಕ್ಷ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಗುರುವಾಯನಕೆರೆ ಮಸೀದಿಯ ಕಾರ್ಯದರ್ಶಿ ಹನೀಫ್, ಜಮೀಯತುಲ್ ಫಲಾಹ್ ಬೆಳ್ತಂಗಡಿ ಪೂರ್ವ ಅಧ್ಯಕ್ಷ ಅಲಿಯಬ್ಬ ಪುಲಾಬೆ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮುಖಂಡ ಕರೀಮ್ ಗೇರುಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

Related posts

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya
error: Content is protected !!