25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

ಬೆಳ್ತಂಗಡಿ: ಮನೆಯಲ್ಲಿ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

ಶಸ್ತ್ರಾಸ್ತ್ರ ಕಾಯ್ದೆಯಡಿ ತಮ್ಮ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಝ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚೆಗೆ ಈ ಮಧ್ಯಂತರ ಆದೇಶ ಮಾಡಿದೆ. ಜತೆಗೆ, ಅರ್ಜಿ ಸಂಬಂಧ ಬೆಳ್ತಂಗಡಿ ಠಾಣೆ ಪೊಲೀಸರು ಹಾಗೂ ಪ್ರಕರಣದ ದೂರುದಾರಾಗಿರುವ ಎಸ್‌ಐಟಿ ಪೊಲೀಸ್ ಅಧಿಕಾರಿ ಸಿ.ಎ. ಸೈಮನ್‌ಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ನವೆಂಬರ್ ಮೂರನೇ ವಾರಕ್ಕೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಹೇಶ್ ತಿಮರೋಡಿ ಅವರ ಮನೆಯಲ್ಲಿ 2025ರ ಆಗಸ್ಟ್ 26ರಂದು ಶೋಧ ನಡೆಸಿದ್ದ ಎಸ್‌ಐಟಿ ಪೊಲೀಸರು, ಸೆಪ್ಟೆಂಬರ್ 16ರಂದು ದೂರು ನೀಡಿದ್ದಾರೆ.

ಅರ್ಜಿದಾರರ ಮನೆಯಲ್ಲಿ ಪರವಾನಗಿ ಇಲ್ಲದ ಏರ್ ಗನ್ ಅನ್ನು ವಶಪಡಿಸಿಕೊಂಡಿದ್ದರೆ, ಶಸ್ತ್ರಾಸ್ತ್ರ ಕಾಯ್ದೆ-1959ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಅರ್ಜಿದಾರರಿಗೆ ಕಿರುಕುಳ ನೀಡುವ ಏಕೈಕ ಉದ್ದೇಶದಿಂದ ಈ ದೂರು ದಾಖಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಧರ್ಮಸ್ಥಳದಲ್ಲಿ ನೂರಾರು ಶವಗಳ ಸಾಮೂಹಿಕ ಅಂತ್ಯಸಂಸ್ಕಾರ ನಡೆದಿದೆ ಎಂಬ ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಪೊಲೀಸರು, 2025ರ ಆಗಸ್ಟ್ 26ರಂದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಶೋಧ ನಡೆಸಿದ ವೇಳೆ ಎರಡು ತಲವಾರುಗಳು ಮತ್ತು ಒಂದು ಬಂದೂಕು ಸೇರಿ ಒಟ್ಟು 44 ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಈ ಬಗ್ಗೆ ತನಿಖಾ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ನಂತರ ಎಸ್‌ಐಟಿ ಅಧಿಕಾರಿ ಸೈಮನ್‌ ಅವರು ಸೆಪ್ಟೆಂಬರ್ 16ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ, ತಿಮರೋಡಿ ತಮ್ಮ ಮನೆಯಲ್ಲಿ ಅಕ್ರಮವಾಗಿ ಮಾರಕಾಸ್ತ್ರಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಮುಂದಿನ ತನಿಖೆ ನಡೆಸಬೇಕು ಎಂದು ಕೋರಿದ್ದರು. ಈ ದೂರಿನ ಆಧಾರದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆ‌ರ್ ದಾಖಲಿಸಲಾಗಿತ್ತು. ಹಾಗೂ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟೀಸ್ ನೀಡಿದ್ದರು. ಇದರಿಂದ, ಎಫ್‌ಐಆ‌ರ್ ರದ್ದು ಕೋರಿ ತಿಮರೋಡಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Related posts

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!