July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನದ ವೇಳೆ ಆಗಮಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್.ಐ.ಟಿ‌ ತನಿಖೆ ಇದೀಗ ಮಹತ್ವದ ಘಟ್ಟ ತಲುಪಿದೆ. ಚಿನ್ನಯ್ಯ ತಂದಿದ್ದ ತಲೆಬುರುಡೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದ್ದು ಇದರಲ್ಲಿ ಯಾವ ರೀತಿಯಾಗಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರಕ್ಕೆ ಎಸ್.ಐ.ಟಿ ತಂಡ ಬಂದಿದ್ದು ಈ ಬಗ್ಗೆ ಮಹತ್ವದ ಸಭೆಗಳು ಎಸ್.ಐ.ಟಿ ಕಚೇರಿಯಲ್ಲಿ ಅ.25, 26ರಂದು ನಡೆಯಲಿದೆ.

ಅ.27ರಂದು ವಿಚಾರಣೆಗಾಗಿ ಹಾಜರಾಗಲು ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ಹಾಗೂ ವಿಠಲ ಗೌಡ ಅವರಿಗೆ ನೋಟೀಸ್ ನೀಡಿದೆ
ಬುರುಡೆಗೆ ಸಂಬಂಧಿಸಿದಂತೆ ಇವರ ವಿಚಾರಣೆ ನಡೆಯುವ ನಿರೀಕ್ಷೆಯಿದೆ. ಅದೇ ರೀತಿ ಚಿನ್ನಯ್ಯ ನೀಡಿದ‌ ಹೇಳಿಕೆಗಳ ಬಗ್ಗೆಯು ತನಿಖೆ ನಡೆಸುವ ಬಗ್ಗೆ ಎಸ್.ಐ.ಟಿ ಮಹತ್ವದ ನಿರ್ಧಾರಗಳನ್ನು ತೆಗದುಕೊಳ್ಳುವ ನಿರೀಕ್ಷೆಯಿದೆ.
ಒಟ್ಟಾರೆಯಾಗಿ ಎಸ್.ಐ.ಟಿ ತನಿಖೆಯಲ್ಲಿ ಮುಂದಿನ ವಾರ ಅತ್ಯಂತ ಮಹತ್ವದ ಬೆಳವಣಿಗೆಗಳು ನಡೆಯುವ ನಿರೀಕ್ಷೆಯಿದೆ.

Related posts

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷರಾಗಿ ಜಯ ಮೂಲ್ಯ , ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಆಯ್ಕೆ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya
error: Content is protected !!