37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ಒಂದು ದಿನದ ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳ ತಂಡ ಆಸ್ಪತ್ರೆಯ ಸುತ್ತಮುತ್ತಲಿನ ಪರಿಸರದ ಸ್ವಚ್ಛತಾ ಕೆಲಸ ಮಾಡಿ ಅಲ್ಲಿನ ಸಾರ್ವಜನಿಕರ ಪ್ರಶಂಸೆಗೆ ಕಾರಣಿಭೂತರಾದರು. ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ವರ್ಗದವರು ಸಹ ಈ ಶಿಬಿರದಲ್ಲಿ ವಿದ್ಯಾರ್ಥಿಗಳೊಡನೆ ಕೈ ಜೋಡಿಸಿದರು.

ಸ್ವಚ್ಛತಾ ಶಿಬಿರದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಪದ್ಮನಾಭ ಕೆ, ವಾಣಿಜ್ಯ ಸಂಘದ ಸಂಚಾಲಕರಾದ ಪ್ರೊ. ನವೀನ್, ಯುವ ರೆಡ್ ಕ್ರಾಸ್ ಹಾಗೂ ರೇಂಜರ್ಸ್ ಘಟಕದ ಅಧಿಕಾರಿ ಡಾ. ರಾಜೇಶ್ವರಿ ಎಚ್ ಎಸ್, ಇಂಗ್ಲಿಷ್ ವಿಭಾಗದ ಪ್ರೊ. ಸುರೇಶ್ ಡಿ. ಭಾಗವಹಿಸಿದ್ದರು. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆಗೆ ಉಪಸ್ಥಿತರಿದ್ದು ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya
error: Content is protected !!