March 7, 2026
ಅಭಿನಂದನೆವರದಿ

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

ಬೆಳ್ತಂಗಡಿ: ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಅವರನ್ನು ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (CBK) ತಂಡದ ವತಿಯಿಂದ ಇಂದು ಅವರ ಮನೆಗೆ ಭೇಟಿ ನೀಡಿ ಗೌರವಿಸಲಾಯಿತು.

ಕುಟುಂಬಸ್ಥರ ಸಮ್ಮುಖದಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮದಲ್ಲಿ CBK ಅಧ್ಯಕ್ಷ ಅಗಸ್ಟೀನ್ ಅವರು CBK ಪರವಾಗಿ ಜೆಸ್ವಿನ್ ಅವರಿಗೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಜೈಸನ್ ಪಟ್ಟೆರಿಲ್, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ., ಕಾರ್ಯದರ್ಶಿ ಶಿಜೋ ಜೋಸೆಫ್, ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ., ಕೋಶಾಧಿಕಾರಿ ರಂಜಿತ್ ಪಿ.ಎಸ್., ಗೌರವ ಸಲಹೆಗಾರ ಜೋಸೆಫ್ ಕೆ.ಡಿ., ಕಾರ್ಯಕಾರಿಣಿ ಸದಸ್ಯರು ಶಾಜಿ ತೋಮಸ್, ಲಿಜೋ ಚಾಕೋ ಹಾಗೂ ಸಂಘಟನೆಯ ಇತರ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೆಸ್ವಿನ್ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂಬರುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಯಶಸ್ಸು ಕೋರಿ ಶುಭಹಾರೈಸಲಾಯಿತು.

Related posts

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya
error: Content is protected !!