23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಫನ್ಪಿನಿಟಿ ಚಿಣ್ಣರ ಪ್ಲೇ ಪಾರ್ಕ್ ಉದ್ಘಾಟನೆ, ಪೋಷಕರಿಗೆ ಆಟೋಟ ಸ್ಪರ್ಧೆ

ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಪೋಷಕರಿಗೆ ಆಟೋಟ ಸ್ಪರ್ದೆ ಮತ್ತು ಎಕ್ಸೆಲ್ ಫನ್ಪಿನಿಟಿ ಚಿಣ್ಣರ ಪ್ಲೇ ಪಾರ್ಕ್ ಇದರ ಉದ್ಘಾಟನೆಯು ಅ 25 ರಂದು ನಡೆಯಿತು.

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಪ್ಲೇ ಪಾರ್ಕ್ ಉದ್ಘಾಟಿಸಿ, ಬಲೂನು ಎತ್ತರಕ್ಕೆ ಹಾರಿಸುವ ಮೂಲಕ ಎಕ್ಸೆಲ್ ಪೋಷಕರ ಆಟೋಟ ಸ್ಪರ್ದೇಗೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಸುಮಂತ್ ಕುಮಾರ್ ಜೈನ್ ಅವರು ಸಂಸ್ಕಾರಭರಿತ ಹಾಗೂ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕೆಂಬ ಸಂಕಲ್ಪ ನಮ್ಮದು.ಮಕ್ಕಳು ಹೆತ್ತವರಿಗೆ ಒಳ್ಳೆಯ ಮಗನಾಗಿ ದೇಶಕ್ಕೆ ಆಸ್ತಿಯಾಗಬೇಕು.ಅಂತಹ ಶಿಕ್ಷಣವನ್ನು ನಮ್ಮ ವಿದ್ಯಾ ಸಂಸ್ಥೆಯಲ್ಲಿ ನೀಡಲಾಗುತ್ತಿದೆ ಎಂದರು.

ಮುಖ್ಯ ಅತಿಥಿಗಳಾಗಿ ಶ್ರೀ ಅರಮಲೆಬೆಟ್ಟ ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರಾದ ಸುಕೇಶ್ ಕುಮಾರ್ ಜೈನ್ ಕಡಂಬು ಮಾತನಾಡಿ ವಿದ್ಯಾಸಂಸ್ಥೆಗಳು ಬೆಳೆದಾಗ ಆ ಊರು,ಪರಿಸರ ಕೂಡ ಅಭಿವೃದ್ದಿ ಹೊಂದುತ್ತದೆ.ಎಕ್ಸೆಲ್ ಸ್ಥಾಪನೆಯಿಂದ ಗುರುವಾಯನಕೆರೆ ಪರಿಸರದ ಸೊಬಗು ಹೆಚ್ಚಿದೆ ಎಂದರು.

ಮುಂಡಾಜೆ ಯಂಗ್ ಚಾಲೇಂಜರ್ಸ್ ಕ್ಲಬ್ ನ ಮುಖ್ಯಸ್ಥರಾದ ನಾಮ್ ದೇವ್ ರಾವ್ ಮುಂಡಾಜೆ ಮಾತನಾಡಿ ಮಕ್ಕಳ ಭವಿಷ್ಯದ ರೂಪಿಸುವ ಶಿಕ್ಷಣ ಎಕ್ಸೆಲ್ ನಲ್ಲಿ ಸಿಗುತ್ತಿದ್ದು ರಾಜ್ಯದ ಉದ್ದಗಲಕ್ಕೂ ಎಕ್ಸೆಲ್ ನ ಕಂಪು ಪಸರಿಸಿದೆ ಎಂದರು. ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ,ಎಕ್ಸೆಲ್ ಟೆಕ್ನೋ ಶಾಲೆಯ ಮುಖ್ಯ ಶಿಕ್ಷಕಿ ಸಹನಾ ಜೈನ್ ಬಿ,ವೇಣೂರು ಎಕ್ಸೆಲ್ ಹೈಸ್ಕೂಲ್ ಶಾಲೆಯ ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್ ಉಪಸ್ಥಿತರಿದ್ದು ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಸುಕೇಶ್ ಕುಮಾರ್ ಜೈನ್ ಕಡಂಬು ಮತ್ತು ನಾಮ್ ದೇವ್ ರಾವ್ ಮುಂಡಾಜೆ ಅವರನ್ನು ಸನ್ಮಾನಿಸಲಾಯಿತು. ಎಕ್ಸೆಲ್ ಟೆಕ್ನೋ ಶಾಲೆಯ ಸಂಯೋಜಕಿ ಲೀನಾ ಪ್ಲೋರಿನ್ ಪಿಂಟೋ ಸ್ವಾಗತಿಸಿ,ಶಿಕ್ಷಕಿ ಸ್ವಾತಿ ಸನ್ಮಾನಿತರ ಪರಿಚಯ ಪತ್ರ ವಾಚಿಸಿದರು.ಗೀತಾ ಕಾರ್ಯಕ್ರಮ ನಿರೂಪಿಸಿದರು. ಚೇತನಾ ವಂದಿಸಿದರು. ಪವಿತ್ರಾ ಕೋಟ್ಯಾನ್ ಹಾಗೂ ಇತರರು ಸಹಕರಿಸಿದರುಬಳಿಕ ವಿದ್ಯಾರ್ಥಿಗಳ ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

Related posts

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರಿಂದ ಗುರುದ್ವಾರ ಭೇಟಿ

Suddi Udaya

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya
error: Content is protected !!