July 23, 2026
ಕರಾವಳಿಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯನ್ನು ಪುತ್ತೂರು ಎ.ಸಿ.ಸ್ಟೆಲ್ಲಾ ವರ್ಗೀಸ್ ಅವರು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಆದೇಶ ಮಾಡಿದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಮತ್ತೆ ಎರಡನೇ ಭಾರಿ ಅ.27 ರಂದು ಪ್ರತಿಭಟನೆ ನಡೆಸಲು ಬೆಳ್ತಂಗಡಿ ಪೊಲೀಸರಿಗೆ ಮನವಿ ಪತ್ರ ನೀಡಿದ್ದರು ಆದ್ರೆ ಪೊಲೀಸರು ಪ್ರತಿಭಟನೆ ಮಾಡಲು ನಿರಾಕರಣೆ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸರಿಗೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಅನಿಲ್ ಅಂತರ ಅ.27 ರಂದು ಪ್ರತಿಭಟನೆ ನಡೆಸಲು ಅ.25 ರಂದು ಮನವಿ ನೀಡಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ (30021/25) ವಿಚಾರಣೆ ನಡೆದು ಆದೇಶ ಬಾಕಿಯಿರುವ ಕಾರಣದಿಂದ ಯಾವುದೇ ಪ್ರತಿಭಟನೆಗಳನ್ನು ಮಾಡಲು ಅವಕಾಶವಿಲ್ಲ ಹಾಗೂ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಳ್ತಂಗಡಿ ಪೊಲೀಸರು ಅನುಮತಿಯನ್ನು ನಿರಾಕರಿಸಿ ಹಿಂಬರಹ ನೀಡಿದ್ದಾರೆ.

ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಕಡೆಯಿಂದ ಈ ಮೊದಲು ಪ್ರತಿಭಟನೆ ಮಾಡಲು ಬೆಳ್ತಂಗಡಿ ತಹಶೀಲ್ದಾರ್ ಗೆ ಅನುಮತಿ ಕೇಳಿದ್ದರು ಆದ್ರೆ ಬೆಳ್ತಂಗಡಿ ಪೊಲೀಸರ ನಿರ್ದೇಶನದಂತೆ ತಹಶೀಲ್ದಾರ್ ಅನುಮತಿಯನ್ನು ನೀಡಿರಲ್ಲಿಲ್ಲ. ಇದೀಗ ಎರಡನೇ ಭಾರಿ ಕೂಡ ಪ್ರತಿಭಟನೆಗೆ ಅನುಮತಿ ಸಿಕ್ಕಿಲ್ಲ.

Related posts

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya
error: Content is protected !!