23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿ

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ ವಲಯದ, ವಲಯ ಕಛೇರಿ ಬಡಗಕಾರಂದೂರು ಎ ಮತ್ತು ಬಿ ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರವನ್ನು ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

ಧಾರ್ಮಿಕ ಪೂಜಾ ಪ್ರಾರ್ಥನೆಯನ್ನು ನೆರವೇರಿಸಿ ಎ.ಬಿ. ಒಕ್ಕೂಟದ ಅಧ್ಯಕ್ಷರುಗಳಾದ ಹರೀಶ್ ಸಾಲ್ಯಾನ್, ಕೃಷ್ಣಪ್ಪ ಪೂಜಾರಿ, ಮೇಲ್ವಿಚಾರಕಿ ಯಶೋಧ ಎಂ. ದೀಪ ಪ್ರಜ್ವಲನೆಗೊಳಿಸಿದರು.

ಜನಜಾಗೃತಿ ತಾಲೂಕು ಸದಸ್ಯರಾದ ಸದಾನಂದ ಪೂಜಾರಿ ಮಾತನಾಡಿ, ಯೋಜನೆಗೆ ಸಂಬಂಧಪಟ್ಟ ಎಲ್ಲಾ ಕಾರ್ಯಕ್ರಮಗಳಲ್ಲಿ ಜೊತೆಯಾಗಿದ್ದು ಕಾರ್ಯಕ್ರಮಗಳ ಬಗ್ಗೆ ಹಾಗೂ ಕರ್ತವ್ಯಗಳನ್ನು ನಿಭಾಯಿಸುವುದರ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಂತರಾಜ್ ಗುಡಿಗಾರ್, ಬಡಗಕಾರಂದೂರು ಗ್ರಾಮದ ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ ಆಚಾರ್ಯ, ಹರೀಶ್ ಆಚಾರ್ಯ, ಪದಾಧಿಕಾರಿಗಳಾದ ಸದಾನಂದ ಪೂಜಾರಿ, ಧರ್ಣಪ್ಪ ಪೂಜಾರಿ, ಪದಾಧಿಕಾರಿಗಳು, ವಲಯದ ಅಧ್ಯಕ್ಷರು ಚಂದಪ್ಪ ಪೂಜಾರಿ, ವಲಯ ಜನಜಾಗೃತಿ ಅಧ್ಯಕ್ಷ ನಾರಾಯಣ ಸಾಲ್ಯಾನ್, ನಾರಾವಿ ಜನಜಾಗೃತಿ ವಲಯ ಅಧ್ಯಕ್ಷ ನಿತ್ಯಾನಂದ ನಾವರ, ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಆಮಂತ್ರಣ ವೇದಿಕೆಯ ವಿಜಯ್ ಕುಮಾರ್ ಜೈನ್, ಮೇಲ್ವಿಚಾರಕಿ ಯಶೋಧ ಎಂ., ಸೇವಾ ಪ್ರತಿನಿಧಿಯವರಾದ ಶುಭ, ಪೂರ್ಣಿಮಾ ಬಡಗಕಾರಂದೂರು, ಹರಿಣಾಕ್ಷಿ ಪಿಲ್ಯ, ಪುಷ್ಪ ನಾವರ, ಮಮತಾ ಪಿಲ್ಯ ಕುದ್ಯಾಡಿ, ಚಂದ್ರಾವತಿ, ಹರಿಣಾಕ್ಷಿ ಶಿರ್ಲಾಲು, ಸುಲೋಚನ ಸುಲ್ಕೇರಿಮೊಗ್ರು, ಕಟ್ಟಡದ ಮಾಲೀಕರು ಮತ್ತು ಸಿ.ಎಸ್.ಸಿ.ಯವರು ಅಳದಂಗಡಿ ವಲಯಕ್ಕೆ ಸಂಬಂಧಪಟ್ಟ ಎಲ್ಲಾ ಒಕ್ಕೂಟದ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ನಾವೂರು: ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಭೇಟಿ

Suddi Udaya
error: Content is protected !!