37.9 C
ಪುತ್ತೂರು, ಬೆಳ್ತಂಗಡಿ
March 6, 2026
ಸಂಘ-ಸಂಸ್ಥೆಗಳು

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆ

ಬೆಳ್ತಂಗಡಿ :ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಅ. 26ರಂದು ಜರುಗಿತು.


ಮಹಾಸಭೆಯ ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಿದ್ದರು.
ಕು. ಹಂಸಿನಿ ಮತ್ತು ಕು. ಶ್ರೇಯ ಪ್ರಾರ್ಥಿಸಿದರು. ನಿರ್ದೇಶಕ ಗೋಪಾಲಕೃಷ್ಣ ಗುಲ್ಲೋಡಿ ಸ್ವಾಗತಿಸಿದರು. ಸಭೆಯ ನೋಟೀಸ್ ನ್ನು ನಿರ್ದೇಶಕ ವಿಜಯ ಕುಮಾರ್ ನ್ಯಾಯತರ್ಪು ಓದಿ ದಾಖಲು ಮಾಡಿದರು. ಕಾರ್ಯದರ್ಶಿ ಗಣೇಶ್ ಗೌಡ ವರದಿ ನೀಡಿದರು. ಕೋಶಾಧಿಕಾರಿ ಯುವರಾಜ್ ಅನಾರು 2024-25ನೇ ಸಾಲಿನ ಲೆಕ್ಕ ಪತ್ರ ನೀಡಿದರು. ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ ಮುಂದಿನ ವರ್ಷದ ಅಭಿವೃದ್ಧಿ ವಿಷಯಗಳ ಬಗ್ಗೆ ಮಾತನಾಡಿದರು. ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ. ಎಂ. ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ದಿನೇಶ್ ಕೊಯ್ಯೂರು ಧನ್ಯವಾದವಿತ್ತರು.


ವೇದಿಕೆಯಲ್ಲಿ ನಿಕಟ ಪೂರ್ವಧ್ಯಕ್ಷ ಸೋಮೇ ಗೌಡ, ಉಪಾಧ್ಯಕ್ಷರಾದ ಧರ್ನಪ್ಪ ಗೌಡ ಬಾನಡ್ಕ, ನಾರಾಯಣ ಗೌಡ ದೇವಸ್ಯ, ನಿರ್ದೇಶಕರಾದ ಡಿ. ಎಂ. ಗೌಡ, ಮಾಧವ ಗೌಡ, ದಿನೇಶ್ ಕೊಯ್ಯೂರು, ವಸಂತ ನಡ, ಕೃಷ್ಣಪ್ಪ ಗೌಡ ಸವಣಾಲು ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ ನಿಡ್ದಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ವಿಜಯ ಕುಮಾರ್ ಕೊಯ್ಯೂರು ಇವರನ್ನು ಸನ್ಮಾನಿಸಲಾಯಿತು

Related posts

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!